ರಾಜ್ಯ

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ ಒಂದು ವಾರ ಕಳೆದಿದೆ. ಆದರೂ ಆತನ ಇನ್ನೂ ಶಿವಮೊಗ್ಗ ಜೈಲಿನಲ್ಲೇ ಇದ್ದಾನೆ.

ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿ ದೂರು ನೀಡಿದ್ದ ಚಿನ್ನಯ್ಯ ಬಳಿಕ ತಾನು ಹೇಳಿದ್ದು ಸುಳ್ಳು ಎಂದು ಹೇಳಿ ಆರೋಪಿಯಾಗಿ ಬದಲಾಗಿದ್ದ. ತನಿಖೆಯ ವೇಳೆ ಚಿನ್ನಯ್ಯ ಹೇಳಿದ್ದ ಹಲವು ಸ್ಥಳಗಳಲ್ಲಿ ಅಗೆದು ಪರೀಕ್ಷೆ ಮಾಡಲಾಗಿತ್ತು.

ಇದನ್ನು ಓದಿ: ಧರ್ಮಸ್ಥಳ ಪ್ರಕರಣ | ಸಾಕ್ಷಿ ದೂರುದಾರ ಚಿನ್ನಯ್ಯಗೆ ಜಾಮೀನು

ಈ ನಡುವೆಯೇ ಚಿನ್ನಯ್ಯ ಹೇಳಿಕೆ ಬದಲಿಸಿ ತಾನು ಸುಳ್ಳು ಸಾಕ್ಷ್ಯ ಹೇಳಿರುವುದಾಗಿ ಎಸ್‌ಐಟಿ ಮುಂದೆ ಒಪ್ಪಿಕೊಂಡಿದ್ದ. ಆತನ ಹೇಳಿಕೆಯ ಆಧಾರದ ಮೇಲೆಯೇ ಎಸ್‌ಐಟಿ ಚಿನ್ನಯ್ಯನನ್ನು ಬಂಧಿಸಿ ಶಿವಮೊಗ್ಗ ಜೈಲಿಗೆ ಕಳುಹಿಸಿದ್ದರು.

ಚಿನ್ನಯ್ಯನ ಪರವಾಗಿ ವಾದ ಮಾಡಲು ನ್ಯಾಯಾಲಯ ಕಾನೂನು ಸೇವಾಪ್ರಾಧಿಕಾರದಿಂದ ವಕೀಲರನ್ನು ನೀಡಿತ್ತು. ಈ ವಕೀಲರ ತಂಡದಿಂದಾಗಿ ಚಿನ್ನಯ್ಯನಿಗೆ ನವೆಂಬರ್‌.26ರಂದು ನ್ಯಾಯಾಲಯದಿಂದ ಜಾಮೀನು ಮಂಜೂರು ಆಗಿತ್ತು.

ಇಬ್ಬರು ಜಾಮೀನುದಾರರು, 1 ಲಕ್ಷ ಭದ್ರತೆ ಬಾಂಡ್‌ ನೀಡಲು ಕೋರ್ಟ್‌ ಆದೇಶ ನೀಡಿತ್ತು. ಆದರೆ ಯಾರೂ ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆಯಲ್ಲಿ ಇನ್ನೂ ಶಿವಮೊಗ್ಗದ ಜೈಲಿನಲ್ಲಿಯೇ ಚಿನ್ನಯ್ಯ ಇರುವಂತಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

23 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

24 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

26 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

27 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

32 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

38 mins ago