ರಾಜ್ಯ

ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಂಧನ: ಹುಟ್ಟೂರು ಮಂಡ್ಯದಲ್ಲಿ ಗ್ರಾಮಸ್ಥರ ಸಂತಸ

ಬೆಂಗಳೂರು: ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಬಂಧನವಾಗಿರುವ ಹಿನ್ನೆಲೆಯಲ್ಲಿ ಹುಟ್ಟೂರು ಮಂಡ್ಯ ಜಿಲ್ಲೆಯ ಚಿಕ್ಕಬಳ್ಳಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಗ್ರಾಮಸ್ಥರು, ಚಿನ್ನಯ್ಯನ ತಂದೆ-ತಾಯಿ ಮೂಲತಃ ತಮಿಳುನಾಡಿನವರು. ಕೂಲಿ ಕೆಲಸಕ್ಕಾಗಿ ಬಂದು ನಮ್ಮ ಊರಿನಲ್ಲಿದ್ದರು. ಚಿನ್ನಯ್ಯ ಚಿಕ್ಕಬಳ್ಳಿ ಗ್ರಾಮದಲ್ಲೇ ಹುಟ್ಟಿ ಬೆಳೆದಿದ್ದ. ಇಲ್ಲಿನ ಸರ್ಕಾರಿ ಶಾಲೆಯಲ್ಲೇ ಓದಿದ್ದ ಎಂದು ತಿಳಿಸಿದ್ದಾರೆ.

ಆತ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಜೀವನ ನಿರ್ವಹಣೆಗಾಗಿ ಸರ್ಕಾರಿ ಯೋಜನೆಯ ಮೂಲಕ ಆತನಿಗೆ ಎರಡು ಹಸು ಖರೀದಿಸಲು ಬ್ಯಾಂಕ್‌ನಿಂದ ಸಾಲ ಕೊಡಿಸಿದ್ದೆ. ಅವುಗಳನ್ನು ರಾತ್ರೋರಾತ್ರಿ ಮಾರಿಕೊಂಡು ಪರಾರಿಯಾಗಿದ್ದ ಎಂದಿದ್ದಾರೆ.

ಮತ್ತೊಬ್ಬರು ಮಾತನಾಡಿ ಚಿನ್ನಯ್ಯ ತಮ್ಮ ಸಹಪಾಠಿ. ಒಂದೇ ಶಾಲೆಯಲ್ಲಿ ಓದಿದ್ದೆವು. ಆತ ಸುಳ್ಳುಗಾರ, ಮೈಗಳ್ಳ ಮತ್ತು ದುರಾಸೆಯ ಮನುಷ್ಯ. ಮಾಸ್ಕ್‌ ಧರಿಸಿ ಓಡಾಡುತ್ತಿದ್ದ ಆತನ ನಡಿಗೆ ಶೈಲಿ ನೋಡಿ ಚಿನ್ನಯ್ಯನೇ ಇರಬೇಕೆಂದು ನಾವು ಆರಂಭದಲ್ಲಿ ಶಂಕಿಸಿದ್ದೆವು. ಆತ ಭಾವನ ಹೆಸರನ್ನು ಹೇಳಿಕೊಂಡ ಮೇಲೆ ನಮಗೆ ಖಚಿತವಾಗಿತ್ತು.

ಧಾರ್ಮಿಕ ಕ್ಷೇತ್ರದ ಮೇಲೆ ಅಪಪ್ರಚಾರ ಮಾಡಿ, ಹೆಸರು ಕೆಡಿಸಲು ಯತ್ನಿಸಿದ್ದಕ್ಕಾಗಿ ತಕ್ಕ ಶಿಕ್ಷೆಯಾಗಿದೆ. ನಮಗೆ ಇದರಿಂದ ಸಂತಸವಾಗಿದೆ. ತಾನು ಧರ್ಮಸ್ಥಳದ ಅಧಿಕಾರಿಯವರಿಗೆ ಹತ್ತಿರದಲ್ಲಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದ, ಆತ ಒಳ್ಳೊಳ್ಳೆಯ ಬಟ್ಟೆ ಧರಿಸಿ ಬರುತ್ತಿದ್ದ. ಒಂದಷ್ಟು ಬಟ್ಟೆಗಳನ್ನು ತಂದು ಇಲ್ಲಿ ಹಂಚುವ ಕೆಲಸ ಮಾಡುತ್ತಿದ್ದ. ಕೆಲವರು ತೆಗೆದುಕೊಳ್ಳುತ್ತಿದ್ದರು. ಇನ್ನು ಕೆಲವರು ನಿರಾಕರಿಸುತ್ತಿದ್ದರು ಎಂದು ಗ್ರಾಮಸ್ಥರು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

5 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

6 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

7 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

8 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

9 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

10 hours ago