ಗದಗ: ಉತ್ತರ ಕರ್ನಾಟಕದ ಸೈಹಾದ್ರಿ, ಆಯುರ್ವೇದ ಔಷಧಿಯ ಸಸ್ಯಕಾಶಿ, ದೇಶದಲ್ಲಿಯೇ ಶುದ್ಧ ಗಾಳಿಗೆ ಹೆಸರಾದ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೇಸಿಗೆ ಆರಂಭಕ್ಕೂ ಮುನ್ನ ಕಪ್ಪತ್ತಗುಡ್ಡ ಬೆಂಕಿಗಾಹುತಿಯಾಗಿದ್ದು, ಮುಂಡರಗಿ ತಾಲ್ಲೂಕಿನ ಡೋಣಿ ಗ್ರಾಮದ ಬಳಿ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡಿದೆ.
ಡೋಣಿ ಬಳಿಯ ನಂದಿವೇರಿ ಮಠದ ಹಿಂಭಾಗ, ಬಂಗಾರಕೊಳ್ಳ, ದೊಡ್ಡ ಬಂಗಾರಕೊಳ್ಳ, ಉಪ್ಪಾರತಟ್ಟು, ನವಣೆ ರಾಶಿ, ಎತ್ತಿನಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿಯ ಕೆನ್ನಾಲಿಗೆಗೆ ಸುಮಾರು ನೂರಾರು ಹೆಕ್ಟೇರ್ ಪ್ರದೇಶದ ಅರಣ್ಯ ಸುಟ್ಟು ಕರಕಲಾಗಿದೆ. ಬೆಂಕಿಗೆ ಸಿಲುಕಿ ಸರೀಸೃಪಗಳು, ಔಷಧೀಯ ಸಸ್ಯಗಳು, ಪ್ರಾಣಿ, ಪಕ್ಷಿಗಳು ಬೆಂಕಿಗಾಹುತಿಯಾಗಿವೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…