ಗದಗ: ಉತ್ತರ ಕರ್ನಾಟಕದ ಸೈಹಾದ್ರಿ, ಆಯುರ್ವೇದ ಔಷಧಿಯ ಸಸ್ಯಕಾಶಿ, ದೇಶದಲ್ಲಿಯೇ ಶುದ್ಧ ಗಾಳಿಗೆ ಹೆಸರಾದ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೇಸಿಗೆ ಆರಂಭಕ್ಕೂ ಮುನ್ನ ಕಪ್ಪತ್ತಗುಡ್ಡ ಬೆಂಕಿಗಾಹುತಿಯಾಗಿದ್ದು, ಮುಂಡರಗಿ ತಾಲ್ಲೂಕಿನ ಡೋಣಿ ಗ್ರಾಮದ ಬಳಿ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡಿದೆ.
ಡೋಣಿ ಬಳಿಯ ನಂದಿವೇರಿ ಮಠದ ಹಿಂಭಾಗ, ಬಂಗಾರಕೊಳ್ಳ, ದೊಡ್ಡ ಬಂಗಾರಕೊಳ್ಳ, ಉಪ್ಪಾರತಟ್ಟು, ನವಣೆ ರಾಶಿ, ಎತ್ತಿನಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿಯ ಕೆನ್ನಾಲಿಗೆಗೆ ಸುಮಾರು ನೂರಾರು ಹೆಕ್ಟೇರ್ ಪ್ರದೇಶದ ಅರಣ್ಯ ಸುಟ್ಟು ಕರಕಲಾಗಿದೆ. ಬೆಂಕಿಗೆ ಸಿಲುಕಿ ಸರೀಸೃಪಗಳು, ಔಷಧೀಯ ಸಸ್ಯಗಳು, ಪ್ರಾಣಿ, ಪಕ್ಷಿಗಳು ಬೆಂಕಿಗಾಹುತಿಯಾಗಿವೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…