ತಮಿಳುನಾಡು: ತನ್ನ ವಿಭಿನ ರೀತಿಯ ಅಭಿನ ಹಾಗೂ ವ್ಯಕ್ತಿತ್ವದಿಂದ ತಮಿಳುನಾಡು ಸಿನಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ವಿಜಯ್ ತಳಪತಿ ಇದೀಗ ಸ್ಥಳಿಯ ರಾಜಕೀಯದಲ್ಲೂ ತಮ್ಮ ಚಾಪು ಮೂಡಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ತಮ್ಮದೇ ಪಕ್ಷ ಸ್ಥಾಪನೆ ಮಾಡುವ ಮೂಲಕ ಸಿನಿ ತಾರೆಯರು ಅಧಿಕಾರ ಚುಕ್ಕಾಣಿ ಹಿಡಿದ ಅನೇಕ ಉದಾಹರಣೆಗಳು ನಮ್ಮ ಕಣ್ಮುಂದಿದೆ.
ಉದಾಹರಣೆಗೆ, ತಮಿಳುನಾಡಿನ ಮುಖ್ಯಮಂತ್ರಿಯಾಗಿ ಎಂಜಿಆರ್, ಆಂಧ್ರಪ್ರದೇಶದ ಎನ್ಟಿಆರ್ ಪ್ರಾದೇಶಿಕ ಪಕ್ಷಗಳನ್ನು ಸ್ಥಾಪಿಸುವುದಲ್ಲದೇ, ಚುನಾವಣೆಯಲ್ಲಿ ಜಯಗಳಿಸಿ ತಮ್ಮ ರಾಜ್ಯಗಳಲ್ಲಿ ಅಧಿಕಾರ ನಡೆಸಿದ್ದಾರೆ.
ಇದೀಗ ಅದೇ ಹಾದಿಯಲ್ಲಿ ತಮಿಳುನಾಡಿನ ತಳಪತಿ, ನನ್ಬಾ ಎಂದೇ ಖ್ಯಾತರಾಗಿರುವ ಜೋಸೆಫ್ ವಿಜಯ್ ಚಂದ್ರಶೇಖರ್ ತಮ್ಮದೇ ಸ್ವಂತ ರಾಜಕೀಯ ಪಕ್ಷ ಒಂದನ್ನು ಸ್ಥಾಪಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಪಕ್ಷ ಸ್ಥಾಪನೆ ಬಗ್ಗೆ ವಿಜಯ್ ಈಗಾಗಲೇ ಒಂದು ಸುತ್ತಿನ ಸಭೆ ನಡೆಸಲಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತಾರೆ ಎನ್ನಾಲಾಗಿದೆ. ಈ ಮೂಲಕ ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ವಿಜಯ್ ಸ್ಫರ್ಧಿಸುವ ತೀರ್ಮಾನ ಮಾಡಿದ್ದಾರೆ ಎಂಬ ಮಾತು ಕೇಳಿ ಬಂದಿದೆ.
ನಟ ಕಮಲ್ ಹಾಸನ್ ಅವರು ಈಗಾಗಲೇ ತಮಿಳುನಾಡಿನಲ್ಲಿ ರಾಜಕೀಯ ಪಕ್ಷ ಸ್ಥಾಪನೆ ಮಾಡಿದ್ದು, ಇದೀಗ ವಿಜಯ್ ಕೂಡ ರಾಜಕೀಯ ಪಕ್ಷ ಸ್ಥಾಪನೆ ಮಾಡುತ್ತಿರುವುದು ಸಿನಿ ಅಭಿಮಾನಿಗಳು ಹಾಗೂ ರಾಜಕೀಯ ಕ್ಷೇತ್ರದಲ್ಲಿ ಕೂತೂಹಲ ಮೂಡಿಸಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…