ರಾಜ್ಯ

ರಾಜ್ಯದಲ್ಲಿ ಆಹಾರ ಪಾರ್ಕ್‌ಗಳ ಸ್ಥಾಪನೆಗೆ ಗರಿಷ್ಠ ಉತ್ತೇಜನ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ಗರಿಷ್ಠ ನೆರವು ಒದಗಿಸಲಾಗುತ್ತಿದೆ. ಈ ಸಾಲಿನಲ್ಲಿ ವಿಮಾನ ನಿಲ್ದಾಣಗಳ ಹತ್ತಿರದಲ್ಲಿರುವ ಶಿವಮೊಗ್ಗ ಜಿಲ್ಲೆಯ ಸೋಗಾನೆ ಹಾಗೂ ವಿಜಯಪುರದ ಇಟ್ಟಂಗಿ ಹಾಳದಲ್ಲಿ ಆಹಾರ ಪಾರ್ಕ್‌ಗಳನ್ನು  ಸ್ಥಾಪಿಸಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು.

ವಿಧಾನಸಭೆಯಲ್ಲಿ ಸದಸ್ಯರಾದ ಟಿ.ಬಿ.ಜಯಚಂದ್ರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸದ ಸಚಿವರು ರಾಜ್ಯದಲ್ಲಿ ಪುಡ್ ಪಾರ್ಕ್ ಗಳ ಸ್ಥಾಪನೆಗೆ ಪ್ರೋತ್ಸಾಹದ ಜೊತೆಗೆ ಬ್ರಾಂಡಿಗ್ ಗೂ ನೆರವು ಒದಗಿಸಲಾಗುತ್ತಿದೆ ಎಂದರು.

ಆಹಾರ ಪಾರ್ಕ್‍ಗಳ ಅನುಷ್ಠಾನಕ್ಕೆ ಹಾಗೂ ಮೇಲುಸ್ತುವಾರಿ ನಿರ್ವಹಿಸಲು ಆಹಾರ ಕರ್ನಾಟಕ ನಿಯಮಿತ ಎಂಬ ವಿಶೇಷ ಉದ್ದೇಶ ಸಂಸ್ಥೆಯನ್ನು (Special Purpose Vehicle) 2003ರಲ್ಲಿ ಕಂಪನಿ ಕಾಯ್ದೆ 1956ರಡಿಯಲ್ಲಿ ಸ್ಥಾಪಿಸಲಾಗಿದೆ. ಆಹಾರ ಕರ್ನಾಟಕ ನಿಯಮಿತವು ಈ ಹಿಂದೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಡಿಯಲ್ಲಿದ್ದು, ಪ್ರಸ್ತುತ ಕೃಷಿ ಇಲಾಖೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಭಾರತ ಸರ್ಕಾರದ ಆಹಾರ ಸಂಸ್ಕರಣಾ ಕೈಗಾರಿಕೆಗಳ ಮಂತ್ರಾಲಯವು ರಾಜ್ಯದಲ್ಲಿ ಹತ್ತನೇ ಪಂಚವಾರ್ಷಿಕ ಯೋಜನೆ ಅವಧಿಯಲ್ಲಿ ನಾಲ್ಕು ಆಹಾರ ಪಾರ್ಕ್‌ಗಳನ್ನು ಸ್ಥಾಪಿಸಲು ಅನುಮೋದನೆ ನೀಡಿರುತ್ತದೆ. ಅದರಂತೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಅಕ್ಷಯ ಫುಡ್‌ ಪಾರ್ಕ್‌, ಬಾಗಲಕೋಟೆಯಲ್ಲಿ ಗ್ರೀನ್‌ ಫುಡ್‌ ಪಾರ್ಕ್‌, ಕೋಲಾರ ಜಿಲ್ಲೆ ಮಾಲೂರಿನಲ್ಲಿ ಇನ್ನೋವಾ ಅಗ್ರಿ ಬಯೋಪಾರ್ಕ್‌, ಮತ್ತು ಕಲಬುರ್ಗಿ ಜಿಲ್ಲೆಯ, ಜೇವರ್ಗಿಯಲ್ಲಿ ಫುಡ್‌ ಪಾರ್ಕ್‌, ಸ್ಥಾಪಿಸಲಾಗಿದೆ. ಉದ್ದೇಶಿತ ಯೋಜನೆಯನ್ವಯ ಪ್ರತಿ ಆಹಾರ ಪಾರ್ಕ್ ಸ್ಥಾಪನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ 50:50 ಅನುಪಾತದಲ್ಲಿ ಒಟ್ಟು 800 ಲಕ್ಷ ರೂಪಾಯಿಗಳನ್ನು ಸಹಾಯ ಧನ/ಬಡ್ಡಿ ರಹಿತ ಅಸುರಕ್ಷಿತ ಸಾಲದ ರೂಪದಲ್ಲಿ ಮಂಜೂರು ಮಾಡಿರುತ್ತದೆ ಎಂದು ಕೃಷಿ ಸಚಿವರು ಹೇಳಿದರು.

ರಾಜ್ಯದ ಆಹಾರ ಪಾರ್ಕುಗಳನ್ನು ಬಲವರ್ದಿಸುವ ನಿಟ್ಟಿನಲ್ಲಿ ನಬಾರ್ಡ್ ಸಂಸ್ಥೆಯ ಅಂಗ ಸಂಸ್ಥೆಯಾದ NABCONS ಸಂಸ್ಥೆಯ ವತಿಯಿಂದ ರಾಜ್ಯ ಪ್ರಾಯೋಜಿತ ಆಹಾರ ಪಾರ್ಕ್‌ಗಳನ್ನು ಪರಿಣಾಮ ಪರಿಶೀಲನ ಅಧ್ಯಯನ ನಡೆಸಲಾಗಿದೆ.

ಆಹಾರ ಪಾರ್ಕ್‌ಗಳನ್ನುಆಂತರಿಕ ರಸ್ತೆ, ಚರಂಡಿಗಳು ಹಾಗೂ ಮೂಲಸೌಕರ್ಯಗಳ ದುರಸ್ಥಿ/ಉನ್ನತೀಕರಣಕ್ಕಾಗಿ ಆಹಾರ ಪಾರ್ಕಿನ ಪ್ರವರ್ತಕರುಗಳೇ ಕ್ರಮ ವಹಿಸಬೇಕಾಗಿದ್ದು, NABARD ಸಂಸ್ಥೆಯಿಂದ ಕಡಿಮೆ ಬಡ್ಡಿ ದರದಲ್ಲಿ ಲಭ್ಯವಿರುವ ಆಹಾರ ಸಂಸ್ಕರಣಾ ನಿಧಿಯಿಂದ ಅಥವಾ India Infrastructure Fund ನಲ್ಲಿ ಇಕ್ವಿಟಿ ರೂಪದಲ್ಲಿ ನೀಡಲಾಗುತ್ತಿರುವ ಸಾಲ ಸೌಲಭ್ಯವನ್ನು ಬಳಸಿಕೊಂಡು ಅಭಿವೃದ್ಧಿ ಪಡಿಸಲು ಸೂಚಿಸಲಾಗಿದೆ ಎಂದು ಎನ್.ಚಲುವರಾಯಸ್ವಾಮಿ ವಿವರಿಸಿದರು.

ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ರೈತರ ಗುಂಪುಗಳು, ರೈತ ಉತ್ಪಾದಕ ಸಂಸ್ಥೆಗಳು ಬೆಳೆಯುತ್ತಿರುವ ಉತ್ಪನ್ನಗಳನ್ನು ಸಂಸ್ಕರಣೆ ಮತ್ತು ಮೌಲ್ಯವರ್ಧನೆಗೊಳಿಸಲು ಆಹಾರ ಪಾರ್ಕ್‌ಗಳನ್ನು ಲಭ್ಯವಿರುವ ಸಾಮಾನ್ಯ ಸೌಲಭ್ಯಗಳನ್ನು ಬಳಸಿಕೊಳ್ಳಲು ಸೂಚಿಸಲಾಗಿದೆ ಎಂದರು.

ಆಹಾರ ಪಾರ್ಕ್‌ಗಳನ್ನು ನಿರೀಕ್ಷಿತ ಮಟ್ಟದಲ್ಲಿ ಸಂಸ್ಕರಣ ಘಟಕಗಳು ಸ್ಥಾಪನೆಯಾಗಿಲ್ಲದೇ ಇರುವುದರಿಂದ ಆಹಾರ ಪಾರ್ಕ್‌ಗಳನ್ನು ಪ್ರವರ್ತಕರು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಏಕ ಗವಾಕ್ಷಿ ಸಮಿತಿ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸಹಯೋಗವನ್ನು ಪಡೆದು ಕೈಗಾರಿಕೆಗಳ ಸ್ಥಾಪನೆಗೆ ಇರುವ ಅಡಚಣೆಗಳನ್ನು ನಿವಾರಿಸಿಕೊಳ್ಳಬಹುದಾಗಿದೆ.

ಘಟಕ ಪ್ರಾರಂಭಿಸಲು ಆಸಕ್ತಿ ವಹಿಸದ ಉದ್ದಿಮೆದಾರರಿಂದ ಕೈಗಾರಿಕಾ ನಿವೇಶನಗಳನ್ನು ಮರು ಹಂಚಿಕೆ ಮಾಡಲು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಸಹಯೋಗದೊಂದಿಗೆ ಕ್ರಮವಹಿಸಲು ಸೂಚಿಸಲಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

8 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

9 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

9 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

10 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

10 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

11 hours ago