ರಾಜ್ಯ

ಮೇ 31 ರಾಜ್ಯಕ್ಕೆ ಮುಂಗಾರು ಪ್ರವೇಶ

ಹೊಸದಿಲ್ಲಿ: ಈ ಬಾರಿ  ಮುಂಗಾರು ಪೂರ್ವ ಮಳೆ ಕರ್ನಾಟಕದಲ್ಲಿ ಅಬ್ಬರಿಸುತ್ತಿದೆ. ಈ ನಡುವೆ ಹವಮಾನ ಇಲಾಖೆ ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದ್ದು, ಇದೇ ಮೇ 31 ರಂದು ನೈರುತ್ಯ ಮುಂಗಾರು ಮಳೆ ಕೇರಳ ಮೂಲಕ ರಾಜ್ಯ ಪ್ರವೇಶಿಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳು ಭೀಕರ ಬರಗಾಲ ಎದುರಿಸಿದ್ದವು. ಆದರೆ ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆ ಇದ್ದು, ರಾಜ್ಯ ಜನತೆ ನಿಟ್ಟುಸಿರು ಬಿಟ್ಟಂತಾಗಿದೆ.

ಕೃಷಿ ಆಧಾರಿತ ಭಾರತದ ಆರ್ಥಿಕತೆಗೆ ಜೂನ್‌, ಜುಲೈ, ಆಗಸ್ಟ್‌ ಹಾಗೂ ಸೆಪ್ಟಂಬರ್‌ ತಿಂಗಳುಗಳೇ ನಿರ್ಣಾಯಕ. ಈ ನಾಲ್ಕು ತಿಂಗಳು ಮಳೆಗಾಲಕ್ಕೆ ಉತ್ತಮ ವೇದಿಕೆಯಾಗಿದೆ. ಆಗಸ್ಟ್‌ ಮತ್ತು ಸೆಪ್ಟಂಬರ್‌ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.
ಕರ್ನಾಟಕ ರಾಜ್ಯದ ಕರಾವಳಿ ಭಾಗಕ್ಕೆ ಮುಂಗಾರು ಮಾರುತಗಳು ಜೂನ್‌ 2 ಅಥವಾ 3ಕ್ಕೆ ಪ್ರವೇಶ ಮಾಡುವ ನೀರಿಕ್ಷೆ ಇದೆ. ಹೀಗಾಗಿ ಹವಮಾನ ಇಲಾಖೆ ಅಧಿಕಾರಿಗಳು ಕೂಡ ಮುಂಗಾರು ಮಾರುತಗಳ ಚಲನವಲನ ಪರಿಶೀಲನೆ ಮಾಡಿ ರೈತರಿಗೆ ಮಾಹಿತಿ ನೀಡುತ್ತಿದ್ದಾರೆ.

ಹವಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ ಈ ಬಗ್ಗೆ ಮಾಹಿತಿ ನೀಡಿ, ಸಾಮಾನ್ಯವಾಗಿ ಕೇರಳದಲ್ಲಿ ಮಾನ್ಸೂನ್ ಪ್ರಾರಂಭವಾಗುವ ದಿನಾಂಕ ಜೂನ್ 1 ಆಗಿರುವುದರಿಂದ ಇದು ಆ ದಿನಕ್ಕೆ ಹತ್ತಿರವಾಗಿದೆ. ಅಲ್ಲದೇ ಈ ಬಾರಿ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿತ್ತು. ಇದಕ್ಕೆ ಪೂರಕ ಎಂಬಂತೆ ಮುಂಗಾರು ಚಲನೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ಕೇರಳದಲ್ಲಿ ಮುಂಗಾರು ಪ್ರವೇಶವು ಕಳೆದ 150 ವರ್ಷಗಳಿಂದ ಬದಲಾಗುತ್ತಿದೆ. 1918ರಲ್ಲಿ ಮುಂಗಾರು ಮೇ 11ರಂದು ರಾಜ್ಯ ಪ್ರವೇಶಿಸಿತ್ತು. ಬಳಿಕ 1972 ಜೂನ್ 18, 2020ರ ಜೂನ್ 1, 2021ರ ಜೂನ್ 3, 2022ರಲ್ಲಿ ಮೇ 29, ಕಳೆದ ವರ್ಷ ಜೂನ್ 8ರಂದು ಮುಂಗಾರು ಮಳೆಯ ಪ್ರವೇಶವಾಗಿತ್ತು. ಈ ಬಾರಿ ಮುಂಚಿತವಾಗಿಯೇ ಮುಂಗಾರಿನ ಆಗಮನದಿಂದ ಈ ವರ್ಷ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ. ದೀರ್ಘಾವಧಿಯ ಸರಾಸರಿಗೆ ಹೋಲಿಸಿದರೆ ಈ ಋತುವಿನಲ್ಲಿ ಹೆಚ್ಚಿನ ಮಳೆಯನ್ನು  ದಾಖಲಿಸುವ ಸಾಧ್ಯತೆ ಇದೆ. ವಾಯುವ್ಯ, ಪೂರ್ವ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

6 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

8 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

9 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

9 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

9 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

12 hours ago