ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು, ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ನಮಗೂ ಒಪ್ಪಂದವಿದೆ. ಈ ಒಪ್ಪಂದ 2023ಕ್ಕೆ ಮುಗಿಯಲಿದೆ. 2023ರ ಬಳಿಕ ನಾವು ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಬಹುದಾಗಿದೆ ಎಂದು ಅವರು ಹೇಳಿದರು.
ಪ್ರಯಾಣಿಕರ ಲೋಡ್ ಬಗ್ಗೆ ಈಗಾಗಲೇ ಚರ್ಚೆ ಮಾಡಲಾಗಿದ್ದು, 2032ರ ವೇಳೆಗೆ ಕೆಐಎ ನಲ್ಲಿ ಜನಸಂದಣಿ ಹೆಚ್ಚಾಗಲಿದ್ದು, ಹೀಗಾಗಿ ನಮಗೆ ರಾಜಧಾನಿಯಲ್ಲಿ ಮತ್ತೊಂದು ಏರ್ಪೋರ್ಟ್ ಬೇಕಾಗುತ್ತದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಮುಂಬೈ, ಗೋವಾ, ದೆಹಲಿಯಲ್ಲಿಯೂ ಸಹಾ ನೂತನ ಏರ್ಪೋರ್ಟ್ಗಳು ನಿರ್ಮಾಣವಾಗಿವೆ. ಮುಂದಿನ ದಿನಗಳಲ್ಲಿ ಬೆಂಗಳೂರಿಗೂ ವಿಮಾನ ನಿಲ್ದಾಣ ಬರಲಿದೆ. ಏರ್ಪೋರ್ಟ್ಗಾಗಿ ಜಾಗ, ಸ್ಥಳ ಇತರೆ ವಿಚಾರಗಳ ಬಗ್ಗೆ ಚರ್ಚಿಸಿ ಬಳಿಕ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…