ಬೆಂಗಳೂರು: ಇಂದು ಸಂಜೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಾತಿ ಗಣತಿ ವರದಿಗೆ ಸಂಬಂಧಿಸಿದಂತೆ ಯಾವ ಸಮುದಾಯವು ಆತಂಕಕ್ಕೆ ಒಳಗಾಗಬಾರದು. ಸಭೆಯಲ್ಲಿ ಎಲ್ಲಾ ಸಮುದಾಯಕ್ಕೂ ಸಮಾಧಾನ ಆಗುವಂತೆ ನಿರ್ಧಾರ ಮಾಡುತ್ತೇವೆ. ಎಲ್ಲಾ ಸಮಸ್ಯೆಗೂ ಪರಿಹಾರ ಹುಡುಕುವ ಕೆಲಸ ಮಾಡಲಾಗುವುದು. ನೂರಕ್ಕೆ ನೂರರಷ್ಟು ಈ ಸಮಸ್ಯೆ ಬಗೆಹರಿಯಲಿದೆ ಎಂದರು.
ಇನ್ನು ಜಾತಿಗಣತಿ ವರದಿ ಸಂಪೂರ್ಣವಾಗಿ ಓದಿ ತಿಳಿದುಕೊಂಡಿದ್ದೇವೆ. ಆದ್ದರಿಂದ ಯಾವ ಸಮುದಾಯದವರು ಆತಂಕಕ್ಕೆ ಒಳಗಾಗುವುದು ಬೇಡ. ಇಂದು ಎಲ್ಲಾ ಸಮಸ್ಯೆ ಬಗೆಹರಿಯುತ್ತದೆ ಎಂದು ತಿಳಿಸಿದರು.





