ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆಗಿದ್ದು ಸತ್ಯ ಆದರೆ ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಮುಡಾ ಹಗರಣ ಕುರಿತು ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣ ಬಗ್ಗೆ ಎಸ್ ಐಟಿ ಮತ್ತಯ ಇಡಿ ತನಿಖೆ ನಡೆಸುತ್ತಿದೆ. ಬ್ಯಾಂಕ್ ಅಧಿಕಾರಿಗಳ ತಪ್ಪಿದೆ. ಈ ಹಗರಣದಲ್ಲಿ ರಾಜ್ಯ ಸರ್ಕಾರದ ಪಾತ್ರ ಇಲ್ಲ. ಕೇಂದ್ರ ವಿತ್ತ ಸಚಿವರು ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿ ಸರ್ಕಾರದಲ್ಲೂ ಹಗರಣ ನಡೆದಿದೆ. ಬಿಜೆಪಿ ಅವಧಿಯಲ್ಲಿ ಆಗಿರುವ ಹಗರಣಗಳ ತನಿಖೆ ನಡೆಸುತ್ತೇವೆ ಎಂದರು.
ಅಲ್ಲದೆ ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ವಿರುದ್ಧ ನೇರವಾಗಿ ಆರೋಪ ಇಲ್ಲ. ತನಿಖೆ ಆಗುತ್ತಿದೆ. ಅವರ ಪಾತ್ರ ಇದೆಯೋ ಇಲ್ಲವೋ ಎಂಬುವುದು ಗೊತ್ತಾಗುತ್ತದೆ. ನಿಗಮಗಳಲ್ಲಿ ಮೌಖಿಕ ಆದೇಶ ಇಲ್ಲ. ಲಿಖಿತವಾಗಿ ಆದೇಶ ನೀಡಿದರೂ ಕಾನೂನು ಬಾಹಿರವಾಗಿ ವ್ಯವಸ್ಥಾಪಕ ನಿರ್ದೇಶಕರು ಮಾಡಬಾರದು. ವಾಲ್ಮೀಕಿ ಹಗರಣದಲ್ಲಿ ವ್ಯವಸ್ಥಾಪಕ ನಿರ್ದೇಶಕರ ಪಾತ್ರ ಇದೆ. ತಪ್ಪಿತಸ್ಥರು ಯಾರೇ ಇದ್ರೂ ಶಿಕ್ಷೆ ಆಗಲಿದೆ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…