ರಾಜ್ಯ

ಪಾಕಿಸ್ತಾನ ವಿರುದ್ಧ ಯುದ್ಧ ಆಗಲೇಬೇಕು: ಸಚಿವ ಎಂ.ಬಿ.ಪಾಟೀಲ್‌

ವಿಜಯಪುರ: ನೆರೆಯ ದೇಶ ಪಾಕಿಸ್ತಾನದ ವಿರುದ್ಧ ಯುದ್ಧ ಆಗಲೇಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಈ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿ ಸಂಬಂಧ ಮಾನವೀಯತೆಯಲ್ಲಿ ನಂಬಿಕೆ ಇಟ್ಟವರು ಈ ಘಟನೆಯನ್ನು ಖಂಡಿಸಬೇಕು. ಪಾಕಿಸ್ತಾನವನ್ನು ಸದೆಬಡಿಯಬೇಕು ಎಂದರು.

ಇದನ್ನೂ ಓದಿ:- ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗ್‌ನಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ್‌ ಭಟ್‌

ಅಂತರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಮೂಲೆಗುಂಪು ಮಾಡಬೇಕು. ಜಮ್ಮು-ಕಾಶ್ಮೀರದ ಜನರು ಭಾರತದ ಪರ ಶಾಂತಿಯ ಕಡೆ ಇದ್ದಾರೆ. ಚೀನಾ, ಅಮೇರಿಕಾ ಸೇರಿದಂತೆ ಎಲ್ಲರೂ ಸಹ ಉಗ್ರವಾದವನ್ನು ಖಂಡಿಸಬೇಕು. ಪಾಕ್‌ ಒಂದು ದರಿದ್ರ ದೇಶ. ಅಲ್ಲಿಯ ಪರಿಸ್ಥಿತಿ ಹೀನಾಯವಾಗಿದೆ. ಯುದ್ಧಕ್ಕೆ ಹೆದರಿ ಸೈನಿಕರು ಹಾಗೂ ಅಧಿಕಾರಿಗಳು ಓಡಿ ಹೋಗಿದ್ದಾರೆ ಎಂದು ಲೇವಡಿ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಆಯಕಟ್ಟಿನ ಜಾಗದಲ್ಲಿ ಸೇನೆಯನ್ನು ನಿಯೋಜಿಸಬೇಕು. ಪಾಕ್‌ ವಿರುದ್ಧ ಯುದ್ಧವಾಗಲೇಬೇಕು. ಪಾಕ್‌ಗೆ ತಕ್ಕ ಶಾಸ್ತಿ ಆಗಬೇಕು. ಪ್ರಧಾನಿ ಮೋದಿ ಪರ ಎಲ್ಲಾ ರಾಜಕೀಯ ಪಕ್ಷಗಳು ಇವೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

6 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

6 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

7 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

7 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

7 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

7 hours ago