ರಾಜ್ಯ

ಪಾಕಿಸ್ತಾನ ವಿರುದ್ಧ ಯುದ್ಧ ಆಗಲೇಬೇಕು: ಸಚಿವ ಎಂ.ಬಿ.ಪಾಟೀಲ್‌

ವಿಜಯಪುರ: ನೆರೆಯ ದೇಶ ಪಾಕಿಸ್ತಾನದ ವಿರುದ್ಧ ಯುದ್ಧ ಆಗಲೇಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಈ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿ ಸಂಬಂಧ ಮಾನವೀಯತೆಯಲ್ಲಿ ನಂಬಿಕೆ ಇಟ್ಟವರು ಈ ಘಟನೆಯನ್ನು ಖಂಡಿಸಬೇಕು. ಪಾಕಿಸ್ತಾನವನ್ನು ಸದೆಬಡಿಯಬೇಕು ಎಂದರು.

ಇದನ್ನೂ ಓದಿ:- ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗ್‌ನಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ್‌ ಭಟ್‌

ಅಂತರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಮೂಲೆಗುಂಪು ಮಾಡಬೇಕು. ಜಮ್ಮು-ಕಾಶ್ಮೀರದ ಜನರು ಭಾರತದ ಪರ ಶಾಂತಿಯ ಕಡೆ ಇದ್ದಾರೆ. ಚೀನಾ, ಅಮೇರಿಕಾ ಸೇರಿದಂತೆ ಎಲ್ಲರೂ ಸಹ ಉಗ್ರವಾದವನ್ನು ಖಂಡಿಸಬೇಕು. ಪಾಕ್‌ ಒಂದು ದರಿದ್ರ ದೇಶ. ಅಲ್ಲಿಯ ಪರಿಸ್ಥಿತಿ ಹೀನಾಯವಾಗಿದೆ. ಯುದ್ಧಕ್ಕೆ ಹೆದರಿ ಸೈನಿಕರು ಹಾಗೂ ಅಧಿಕಾರಿಗಳು ಓಡಿ ಹೋಗಿದ್ದಾರೆ ಎಂದು ಲೇವಡಿ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಆಯಕಟ್ಟಿನ ಜಾಗದಲ್ಲಿ ಸೇನೆಯನ್ನು ನಿಯೋಜಿಸಬೇಕು. ಪಾಕ್‌ ವಿರುದ್ಧ ಯುದ್ಧವಾಗಲೇಬೇಕು. ಪಾಕ್‌ಗೆ ತಕ್ಕ ಶಾಸ್ತಿ ಆಗಬೇಕು. ಪ್ರಧಾನಿ ಮೋದಿ ಪರ ಎಲ್ಲಾ ರಾಜಕೀಯ ಪಕ್ಷಗಳು ಇವೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

55 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

60 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

1 hour ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

1 hour ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

10 hours ago