ಬೆಂಗಳೂರು: ರಾಜ್ಯದ ಬೇರೆ ಬೇರೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಒಂದೊಂದು ರೀತಿಯ ದರವಿದ್ದ ಹಿನ್ನೆಲೆ ಮನೆಗಳಿಗೆ ಗ್ಯಾಸ್ ಸಂಪರ್ಕ ಒದಗಿಸಲು ವಿಳಂಬವಾಗಿದೆ. ಇದೀಗ ಈ ಸಮಸ್ಯೆ ಬಗೆಹರಿದಿದ್ದು, ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಮನೆಗಳಿಗೆ ಪೈಪ್ ಲೈನ್ ಮೂಲಕ ಅಡುಗೆ ಅನಿಲ ಪೂರೈಸಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.4) ಬಜೆಟ್ ಅಧಿವೇಶನದಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಗ್ಯಾಸ್ ಪೂರೈಕೆ ಕೊಳವೆ ಅಳವಡಿಸಲು ದೇಶದ ವಿವಿಧ ರಾಜ್ಯಗಳಲ್ಲಿ ಇರುವ ನಗರ ಅನಿಲ ಸರಬರಾಜು ನೀತಿಯ ಪ್ರಕಾರ ಮೀಟರ್ಗೆ ಒಂದು ರೂಪಾಯಿ ನಿಗಧಿಪಡಿಸಲಾಗಿದೆ. ಅಲ್ಲದೇ ಉತ್ತರ ಪ್ರದೇಶ ಸೇರಿದಂತೆ ಅನೇಕ ರಾಜ್ಯಗಳಲ್ಲಿನ ಉತ್ತಮ ಉಪಕ್ರಮಗಳ ಬಗ್ಗೆಯೂ ಕೇಂದ್ರ ಸರ್ಕಾರವೇ ರಾಜ್ಯಕ್ಕೆ ಪತ್ರ ಬರೆದು ತಿಳಿಸಿದೆ ಎಂದರು.
ರಾಜ್ಯದಲ್ಲಿ ಆ ವೇಳೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಸಾರ್ವಜನಿಕ ಹಿತ ಮತ್ತು ಪರಿಸರಸ್ನೇಹಿ ಕ್ರಮವೆಂದೂ ನಾವು ಇದನ್ನು ಒಪ್ಪಿಕೊಂಡಿದ್ದೇವೆ. ಅದರಂತೆ ರಾಜ್ಯದಲ್ಲಿ ಒಟ್ಟು 66.25 ಲಕ್ಷ ಮನೆಗಳಿಗೆ ಸಂಪರ್ಕ ಸೇವೆ ಕಲ್ಪಿಸುವ ಹಾಗೂ 1,022 ಸಿಎನ್ಜಿ ಮರುಪೂರ್ಣ ಕೇಂದ್ರಗಳನ್ನು ತೆರೆಯುವ ಗುರಿಯನ್ನಿಟ್ಟುಕೊಳ್ಳಾಗಿದೆ ಎಂದು ಹೇಳಿದರು.
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…