ಬೆಂಗಳೂರು: ರಾಜ್ಯದ ಬೇರೆ ಬೇರೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಒಂದೊಂದು ರೀತಿಯ ದರವಿದ್ದ ಹಿನ್ನೆಲೆ ಮನೆಗಳಿಗೆ ಗ್ಯಾಸ್ ಸಂಪರ್ಕ ಒದಗಿಸಲು ವಿಳಂಬವಾಗಿದೆ. ಇದೀಗ ಈ ಸಮಸ್ಯೆ ಬಗೆಹರಿದಿದ್ದು, ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಮನೆಗಳಿಗೆ ಪೈಪ್ ಲೈನ್ ಮೂಲಕ ಅಡುಗೆ ಅನಿಲ ಪೂರೈಸಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.4) ಬಜೆಟ್ ಅಧಿವೇಶನದಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಗ್ಯಾಸ್ ಪೂರೈಕೆ ಕೊಳವೆ ಅಳವಡಿಸಲು ದೇಶದ ವಿವಿಧ ರಾಜ್ಯಗಳಲ್ಲಿ ಇರುವ ನಗರ ಅನಿಲ ಸರಬರಾಜು ನೀತಿಯ ಪ್ರಕಾರ ಮೀಟರ್ಗೆ ಒಂದು ರೂಪಾಯಿ ನಿಗಧಿಪಡಿಸಲಾಗಿದೆ. ಅಲ್ಲದೇ ಉತ್ತರ ಪ್ರದೇಶ ಸೇರಿದಂತೆ ಅನೇಕ ರಾಜ್ಯಗಳಲ್ಲಿನ ಉತ್ತಮ ಉಪಕ್ರಮಗಳ ಬಗ್ಗೆಯೂ ಕೇಂದ್ರ ಸರ್ಕಾರವೇ ರಾಜ್ಯಕ್ಕೆ ಪತ್ರ ಬರೆದು ತಿಳಿಸಿದೆ ಎಂದರು.
ರಾಜ್ಯದಲ್ಲಿ ಆ ವೇಳೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಸಾರ್ವಜನಿಕ ಹಿತ ಮತ್ತು ಪರಿಸರಸ್ನೇಹಿ ಕ್ರಮವೆಂದೂ ನಾವು ಇದನ್ನು ಒಪ್ಪಿಕೊಂಡಿದ್ದೇವೆ. ಅದರಂತೆ ರಾಜ್ಯದಲ್ಲಿ ಒಟ್ಟು 66.25 ಲಕ್ಷ ಮನೆಗಳಿಗೆ ಸಂಪರ್ಕ ಸೇವೆ ಕಲ್ಪಿಸುವ ಹಾಗೂ 1,022 ಸಿಎನ್ಜಿ ಮರುಪೂರ್ಣ ಕೇಂದ್ರಗಳನ್ನು ತೆರೆಯುವ ಗುರಿಯನ್ನಿಟ್ಟುಕೊಳ್ಳಾಗಿದೆ ಎಂದು ಹೇಳಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…