ರಾಜ್ಯ

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಅರ್ಥಪೂರ್ಣ ತೆರೆ: ಎಂಬಿ ಪಾಟೀಲ್‌

ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ರಾಜ್ಯಕ್ಕೆ 10,27,378 ಕೋಟಿ ರೂ. ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್‌ ಹೇಳಿದ್ದಾರೆ.

ನಗರದ ಅರಮನೆ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಲಯವಾರು ಅಂಕಿಅಂಶಗಳ ಸಮೇತ ಮಾಹಿತಿ ನೀಡಿದರು. ಜತೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದರು.

ಹೂಡಿಕೆದಾರರ ಸಮಾವೇಶದ ಸಾಧನೆಗಳ ಬಗ್ಗೆ ಮಾತನಾಡಿದ ಸಚಿವರು, `ಕೆಲವು ಪ್ರತಿಷ್ಠಿತ ಕಂಪನಿಗಳು ಭಾರೀ ಹೂಡಿಕೆಗೆ ಆಸಕ್ತಿ ತೋರಿದ್ದು, ಒಡಂಬಡಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇವು ಆಖೈರಾದರೆ ಸಮಾವೇಶದ ಮೂಲಕ ಬರಲಿರುವ ಬಂಡವಾಳದ ಮೊತ್ತ ಇನ್ನೂ ಗಮನಾರ್ಹವಾಗಿ ಏರಲಿದೆ. ಈಗ ಖಾತ್ರಿಯಾಗಿರುವ ಹೂಡಿಕೆಯಲ್ಲಿ ಶೇಕಡ 75ರಷ್ಟು ಬೆಂಗಳೂರಿನ ಆಚೆ ಇರುವ ಪ್ರದೇಶಗಳಿಗೆ ಹೋಗಲಿದ್ದು, ಶೇಕಡ 45ರಷ್ಟು ಬಂಡವಾಳವು ಉತ್ತರ ಕರ್ನಾಟಕದ ಪ್ರದೇಶಗಳಿಗೆ ಹರಿಯಲಿದೆ’ ಎಂದರು.

ಸೃಷ್ಟಿಯಾಗಲಿರುವ 6 ಲಕ್ಷ ಉದ್ಯೋಗಗಳು ತಯಾರಿಕೆ ಮತ್ತು ಇಂಧನ ಉತ್ಪಾದನೆ ಕ್ಷೇತ್ರಕ್ಕೆ ಸೇರಿವೆ. ಹೂಡಿಕೆಗಳಲ್ಲಿ ಜಿಂದಾಲ್ ಸಮೂಹವು ಇಂಧನ, ಸಿಮೆಂಟ್, ಉಕ್ಕು ಮತ್ತು ಪೂರಕ ಉದ್ಯಮಗಳಲ್ಲಿ 1.2 ಲಕ್ಷ ಕೋಟಿ ರೂ. ಹೂಡುತ್ತಿದೆ. ಬಲ್ದೋಟಾ ಸಮೂಹವು ಕೊಪ್ಪಳದಲ್ಲಿ 54 ಸಾವಿರ ಕೋಟಿ ರೂ. ಹೂಡಿಕೆಯೊಂದಿಗೆ ಕೊಪ್ಪಳದಲ್ಲಿ ಉಕ್ಕು ತಯಾರಿಕಾ ಘಟಕವನ್ನು ಸ್ಥಾಪಿಸುತ್ತಿದೆ. ಲ್ಯಾಮ್ ರೀಸರ್ಚ್ ಕಂಪನಿ ತಯಾರಿಕೆ ಮತ್ತು ಸಂಶೋಧನೆಗೆ 10 ಸಾವಿರ ಕೋಟಿ ರೂ.ಗಳಷ್ಟು ಬೃಹತ್ ಬಂಡವಾಳ ತೊಡಗಿಸುತ್ತಿದೆ ಎಂದು ಮಾಹಿತಿ ನೀಡಿದರು.

ಉಳಿದಂತೆ, ಸ್ನೀಡರ್ ಎಲೆಕ್ಟ್ರಿಕ್ ಸಂಸ್ಥೆಯು ವಿದ್ಯುತ್ ಸಾಧನಗಳ ತಯಾರಿಕೆ ಮತ್ತು ಸಂಶೋಧನೆಗೆ 2,247 ಕೋಟಿ ರೂ, ವೋಲ್ವೊ ಕಂಪನಿಯು ವಿದ್ಯುಚ್ಚಾಲಿತ ಬಸ್/ಟ್ರಕ್ ತಯಾರಿಕೆಗೆ 1,400 ಕೋಟಿ ರೂ, ಹೋಂಡಾ ಕಂಪನಿಯು ಇ.ವಿ. ವಾಹನಗಳ ತಯಾರಿಕೆಗೆ 600 ಕೋಟಿ ರೂ. ಮತ್ತು ಸ್ಯಾಫ್ರಾನ್ ಕಂಪನಿಯು ಏವಿಯಾನಿಕ್ಸ್ ಉತ್ಪಾದನೆಗೆ 225 ಕೋಟಿ ರೂ. ಹೂಡುತ್ತಿವೆ. 2025-30ರವರೆಗಿನ ನೂತನ ಕೈಗಾರಿಕಾ ನೀತಿಯಡಿ ಒಟ್ಟಾರೆಯಾಗಿ 20 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಇಟ್ಟುಕೊಳ್ಳಲಾಗಿದೆ ಎಂದು ವಿವರಿಸಿದರು.

ಹೊಸ ನೀತಿಯಡಿಯಲ್ಲಿ ತುಮಕೂರು ಮತ್ತು ವಿಜಯಪುರದಲ್ಲಿ ಕೈಗಾರಿಕಾ ಪಾರ್ಕ್, ಹುಬ್ಬಳ್ಳಿಯಲ್ಲಿ ಸ್ಟಾರ್ಟಪ್ ಪಾರ್ಕ್, ಉಳಿದ ಭಾಗಗಳಲ್ಲಿ ಡೀಪ್-ಟೆಕ್ ಪಾರ್ಕ್ ಮತ್ತು ಸ್ವಿಫ್ಟ್ ಸಿಟಿ ಮುಂತಾದವು ಅಸ್ತಿತ್ವಕ್ಕೆ ಬರಲಿವೆ. ಡೀಪ್ ಟೆಕ್ ಮತ್ತು ಸ್ವಿಫ್ಟ್ ಸಿಟಿ ಯೋಜನೆಗಳು ತಲಾ 1 ಲಕ್ಷ ಕೋಟಿ ರೂ. ಹೂಡಿಕೆ ಸೆಳೆಯುವ ಮತ್ತು ತಲಾ 1 ಲಕ್ಷ ಉದ್ಯೋಗ ಸೃಷ್ಟಿಸುವಂತಹ ಧಾರಣಾಶಕ್ತಿ ಹೊಂದಿವೆ. ಕ್ವಿನ್ ಸಿಟಿ ಅಭಿವೃದ್ಧಿಗೆ ಸಂಬಂಧಿಸಿದಂತೆ 10 ವಿ.ವಿ.ಗಳೊಂದಿಗೆ ಒಡಂಬಡಿಕೆಗೆ ಅಂಕಿತ ಹಾಕಲಾಗಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

5 mins ago

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…

22 mins ago

ಆರೋಗ್ಯ ಕೇಂದ್ರದ ಮುಂಭಾಗವೇ ವಾಹನಗಳ ಪಾರ್ಕಿಂಗ್:‌ ಸಾರ್ವಜನಿಕರಿಗೆ ಕಿರಿಕಿರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…

34 mins ago

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ನಿವಾಸಿಗಳಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…

40 mins ago

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌…

1 hour ago

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ ಟ್ರಂಪ್‌ ನೀತಿ ವಿರೋಧಿಸಿ…

2 hours ago