ರಾಜ್ಯ

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಅರ್ಥಪೂರ್ಣ ತೆರೆ: ಎಂಬಿ ಪಾಟೀಲ್‌

ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ರಾಜ್ಯಕ್ಕೆ 10,27,378 ಕೋಟಿ ರೂ. ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್‌ ಹೇಳಿದ್ದಾರೆ.

ನಗರದ ಅರಮನೆ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಲಯವಾರು ಅಂಕಿಅಂಶಗಳ ಸಮೇತ ಮಾಹಿತಿ ನೀಡಿದರು. ಜತೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದರು.

ಹೂಡಿಕೆದಾರರ ಸಮಾವೇಶದ ಸಾಧನೆಗಳ ಬಗ್ಗೆ ಮಾತನಾಡಿದ ಸಚಿವರು, `ಕೆಲವು ಪ್ರತಿಷ್ಠಿತ ಕಂಪನಿಗಳು ಭಾರೀ ಹೂಡಿಕೆಗೆ ಆಸಕ್ತಿ ತೋರಿದ್ದು, ಒಡಂಬಡಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇವು ಆಖೈರಾದರೆ ಸಮಾವೇಶದ ಮೂಲಕ ಬರಲಿರುವ ಬಂಡವಾಳದ ಮೊತ್ತ ಇನ್ನೂ ಗಮನಾರ್ಹವಾಗಿ ಏರಲಿದೆ. ಈಗ ಖಾತ್ರಿಯಾಗಿರುವ ಹೂಡಿಕೆಯಲ್ಲಿ ಶೇಕಡ 75ರಷ್ಟು ಬೆಂಗಳೂರಿನ ಆಚೆ ಇರುವ ಪ್ರದೇಶಗಳಿಗೆ ಹೋಗಲಿದ್ದು, ಶೇಕಡ 45ರಷ್ಟು ಬಂಡವಾಳವು ಉತ್ತರ ಕರ್ನಾಟಕದ ಪ್ರದೇಶಗಳಿಗೆ ಹರಿಯಲಿದೆ’ ಎಂದರು.

ಸೃಷ್ಟಿಯಾಗಲಿರುವ 6 ಲಕ್ಷ ಉದ್ಯೋಗಗಳು ತಯಾರಿಕೆ ಮತ್ತು ಇಂಧನ ಉತ್ಪಾದನೆ ಕ್ಷೇತ್ರಕ್ಕೆ ಸೇರಿವೆ. ಹೂಡಿಕೆಗಳಲ್ಲಿ ಜಿಂದಾಲ್ ಸಮೂಹವು ಇಂಧನ, ಸಿಮೆಂಟ್, ಉಕ್ಕು ಮತ್ತು ಪೂರಕ ಉದ್ಯಮಗಳಲ್ಲಿ 1.2 ಲಕ್ಷ ಕೋಟಿ ರೂ. ಹೂಡುತ್ತಿದೆ. ಬಲ್ದೋಟಾ ಸಮೂಹವು ಕೊಪ್ಪಳದಲ್ಲಿ 54 ಸಾವಿರ ಕೋಟಿ ರೂ. ಹೂಡಿಕೆಯೊಂದಿಗೆ ಕೊಪ್ಪಳದಲ್ಲಿ ಉಕ್ಕು ತಯಾರಿಕಾ ಘಟಕವನ್ನು ಸ್ಥಾಪಿಸುತ್ತಿದೆ. ಲ್ಯಾಮ್ ರೀಸರ್ಚ್ ಕಂಪನಿ ತಯಾರಿಕೆ ಮತ್ತು ಸಂಶೋಧನೆಗೆ 10 ಸಾವಿರ ಕೋಟಿ ರೂ.ಗಳಷ್ಟು ಬೃಹತ್ ಬಂಡವಾಳ ತೊಡಗಿಸುತ್ತಿದೆ ಎಂದು ಮಾಹಿತಿ ನೀಡಿದರು.

ಉಳಿದಂತೆ, ಸ್ನೀಡರ್ ಎಲೆಕ್ಟ್ರಿಕ್ ಸಂಸ್ಥೆಯು ವಿದ್ಯುತ್ ಸಾಧನಗಳ ತಯಾರಿಕೆ ಮತ್ತು ಸಂಶೋಧನೆಗೆ 2,247 ಕೋಟಿ ರೂ, ವೋಲ್ವೊ ಕಂಪನಿಯು ವಿದ್ಯುಚ್ಚಾಲಿತ ಬಸ್/ಟ್ರಕ್ ತಯಾರಿಕೆಗೆ 1,400 ಕೋಟಿ ರೂ, ಹೋಂಡಾ ಕಂಪನಿಯು ಇ.ವಿ. ವಾಹನಗಳ ತಯಾರಿಕೆಗೆ 600 ಕೋಟಿ ರೂ. ಮತ್ತು ಸ್ಯಾಫ್ರಾನ್ ಕಂಪನಿಯು ಏವಿಯಾನಿಕ್ಸ್ ಉತ್ಪಾದನೆಗೆ 225 ಕೋಟಿ ರೂ. ಹೂಡುತ್ತಿವೆ. 2025-30ರವರೆಗಿನ ನೂತನ ಕೈಗಾರಿಕಾ ನೀತಿಯಡಿ ಒಟ್ಟಾರೆಯಾಗಿ 20 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಇಟ್ಟುಕೊಳ್ಳಲಾಗಿದೆ ಎಂದು ವಿವರಿಸಿದರು.

ಹೊಸ ನೀತಿಯಡಿಯಲ್ಲಿ ತುಮಕೂರು ಮತ್ತು ವಿಜಯಪುರದಲ್ಲಿ ಕೈಗಾರಿಕಾ ಪಾರ್ಕ್, ಹುಬ್ಬಳ್ಳಿಯಲ್ಲಿ ಸ್ಟಾರ್ಟಪ್ ಪಾರ್ಕ್, ಉಳಿದ ಭಾಗಗಳಲ್ಲಿ ಡೀಪ್-ಟೆಕ್ ಪಾರ್ಕ್ ಮತ್ತು ಸ್ವಿಫ್ಟ್ ಸಿಟಿ ಮುಂತಾದವು ಅಸ್ತಿತ್ವಕ್ಕೆ ಬರಲಿವೆ. ಡೀಪ್ ಟೆಕ್ ಮತ್ತು ಸ್ವಿಫ್ಟ್ ಸಿಟಿ ಯೋಜನೆಗಳು ತಲಾ 1 ಲಕ್ಷ ಕೋಟಿ ರೂ. ಹೂಡಿಕೆ ಸೆಳೆಯುವ ಮತ್ತು ತಲಾ 1 ಲಕ್ಷ ಉದ್ಯೋಗ ಸೃಷ್ಟಿಸುವಂತಹ ಧಾರಣಾಶಕ್ತಿ ಹೊಂದಿವೆ. ಕ್ವಿನ್ ಸಿಟಿ ಅಭಿವೃದ್ಧಿಗೆ ಸಂಬಂಧಿಸಿದಂತೆ 10 ವಿ.ವಿ.ಗಳೊಂದಿಗೆ ಒಡಂಬಡಿಕೆಗೆ ಅಂಕಿತ ಹಾಕಲಾಗಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

4 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

4 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

4 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

4 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

4 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

4 hours ago