ಬೆಂಗಳೂರು : ಕಾವೇರಿ ನದಿ ನೀರಿನ ಮಾಲಿನ್ಯ ನಿಯಂತ್ರಣಕ್ಕೆ ತಾಂತ್ರಿಕ ತಜ್ಞರ ಸಮಿತಿ ರಚಿಸಲಾಗಿದೆ. ಈ ಸಮಿತಿ ಕಾವೇರಿ ನದಿ ಮತ್ತು ಲಕ್ಷ್ಮಣ ತೀರ್ಥ ನದಿ ಒಳಗೊಂಡಂತೆ ನೀರಿನ ಮಾಲಿನ್ಯದ ತಡೆಗೆ ತುರ್ತು ಮಾರ್ಗೋಪಾಯಗಳನ್ನು ಕೈಗೊಳ್ಳುವ ಸಂಬಂಧ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವರ ಈಶ್ವರ್ ಖಂಡ್ರೆ ವಿಧಾನ ಪರಿಷತ್ತಿನಲ್ಲಿ ಗುರುವಾರ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಡಾ.ಡಿ. ತಿಮ್ಮಯ್ಯಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಸಮಿತಿ ವರದಿ ಕುರಿತು ಸರ್ಕಾರ ಪರಿಶೀಲಿಸುತ್ತಿದ್ದು, ಅದರ ಅನ್ವಯ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಲಕ್ಷ್ಮಣ ತೀರ್ಥ ನದಿಗೆ ಹುಣಸೂರು ಪಟ್ಟಣದ ಪುರಸಭೆಯ ವ್ಯಾಪ್ತಿಯಲ್ಲಿನ ಕಲುಷಿತ ನೀರು ಸೇರದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ತಾಜ್ಯ ಸಂಸ್ಕರಣಾ ಘಟಕವನ್ನು ನಿರ್ಮಿಸಲಾಗುತ್ತಿದೆ. ಪ್ರತಿ ತಿಂಗಳೂ ನೀರಿನ ಗುಣಮಟ್ಟವನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ನದಿ ನೀರು ಕುಡಿಯಲು ಯೋಗ್ಯವಾಗಿದೆ ಎಂದು ದೃಢಪಟ್ಟಿದೆ ಎಂದರು.
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…