ಬೆಂಗಳೂರು : ಕಾವೇರಿ ನದಿ ನೀರಿನ ಮಾಲಿನ್ಯ ನಿಯಂತ್ರಣಕ್ಕೆ ತಾಂತ್ರಿಕ ತಜ್ಞರ ಸಮಿತಿ ರಚಿಸಲಾಗಿದೆ. ಈ ಸಮಿತಿ ಕಾವೇರಿ ನದಿ ಮತ್ತು ಲಕ್ಷ್ಮಣ ತೀರ್ಥ ನದಿ ಒಳಗೊಂಡಂತೆ ನೀರಿನ ಮಾಲಿನ್ಯದ ತಡೆಗೆ ತುರ್ತು ಮಾರ್ಗೋಪಾಯಗಳನ್ನು ಕೈಗೊಳ್ಳುವ ಸಂಬಂಧ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವರ ಈಶ್ವರ್ ಖಂಡ್ರೆ ವಿಧಾನ ಪರಿಷತ್ತಿನಲ್ಲಿ ಗುರುವಾರ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಡಾ.ಡಿ. ತಿಮ್ಮಯ್ಯಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಸಮಿತಿ ವರದಿ ಕುರಿತು ಸರ್ಕಾರ ಪರಿಶೀಲಿಸುತ್ತಿದ್ದು, ಅದರ ಅನ್ವಯ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಲಕ್ಷ್ಮಣ ತೀರ್ಥ ನದಿಗೆ ಹುಣಸೂರು ಪಟ್ಟಣದ ಪುರಸಭೆಯ ವ್ಯಾಪ್ತಿಯಲ್ಲಿನ ಕಲುಷಿತ ನೀರು ಸೇರದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ತಾಜ್ಯ ಸಂಸ್ಕರಣಾ ಘಟಕವನ್ನು ನಿರ್ಮಿಸಲಾಗುತ್ತಿದೆ. ಪ್ರತಿ ತಿಂಗಳೂ ನೀರಿನ ಗುಣಮಟ್ಟವನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ನದಿ ನೀರು ಕುಡಿಯಲು ಯೋಗ್ಯವಾಗಿದೆ ಎಂದು ದೃಢಪಟ್ಟಿದೆ ಎಂದರು.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…