ರಾಜ್ಯ

ಸಾಮಾಜಿಕ ನ್ಯಾಯದ ಬಗ್ಗೆ ಮಾಧ್ಯಮಗಳು ಜನರಲ್ಲಿ ಜಾಗೃತಿ ಮೂಡಿಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.

ಅವರು ಇಂದು ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2024ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ 2017 ರಿಂದ 2023ನೇ ಕ್ಯಾಲೆಂಡರ್ ವರ್ಷದ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಭಾಗವಹಿಸಿ ಮಾತನಾಡಿದರು.

ಅಭಿಪ್ರಾಯಗಳು ವಸ್ತುಸ್ಥಿತಿಯಿಂದ ಕೂಡಿರಬೇಕು. ಅನೇಕ ಬಾರಿ ಊಹಾ ಪತ್ರಿಕೋದ್ಯಮ ಆಗಿರುತ್ತದೆ, ಅದು ಆಗಬಾರದು. ಸತ್ಯ ಅಸತ್ಯಗಳನ್ನು ಪತ್ತೆ ಹಚ್ಚಿ, ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು. ಯಾವುದೇ ಕಾರಣಕ್ಕೂ ಒಬ್ಬ ವ್ಯಕ್ತಿಯು ತಪ್ಪು ಮಾಡದಿದ್ದರೂ, ಸುಮ್ಮನೆ ಆರೋಪಗಳನ್ನು ಮಾಡಬಾರದು. ಸರ್ಕಾರದಲ್ಲಿ ಎಲ್ಲವೂ ಸರಿಯಾಗಿರುವುದಿಲ್ಲ ನಿಜ, ಆದರೆ ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನ ವಿರೋಧಿ ಕಾರ್ಯವನ್ನು ಸರ್ಕಾರ ಮಾಡಿದರೆ ಅದನ್ನೂ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು.

ಸಮಾಜದಲ್ಲಿ ಜಾತಿ ವ್ಯವಸ್ಥೆ, ಅಸಮಾನತೆ ಇದೆ. ಸಾಮಾಜಿಕ ಅಸಮಾನತೆ ಬಗ್ಗೆ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು. ಬಹುಸಂಖ್ಯಾತರಾಗಿರುವ ಜನ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವುದು ಅಸಮಾನತೆಗೆ ಪ್ರಮುಖ ಕಾರಣ. ಇದನ್ನು ನೇರವಾಗಿ ಜನರಿಗೆ ತಿಳಿಸುವ ಪ್ರಯತ್ನದಲ್ಲಿ, ಯಾವುದೇ ರಾಜಿ ಇಲ್ಲದೆ, ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಕ್ಕಿದೆಯೇ, ಇಲ್ಲವೇ, ಸಮಬಾಳು, ಸಮಪಾಲು ಅನುಷ್ಠಾನಕ್ಕೆ ಬಂದಿದೆಯೇ ಎಂಬುದನ್ನು ಪರಿಶೀಲಿಸಬೇಕು. ಸಾಮಾಜಿಕ ನ್ಯಾಯ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿರಬೇಕಾದ ವಿಚಾರವಲ್ಲ. ಎಲ್ಲರಿಗೂ ದೇಶದ ವ್ಯವಸ್ಥೆಯಲ್ಲಿ ಇನ್ನೂ ಸಹ ಸಮಾನವಾದ ಅವಕಾಶ ಸಿಗದಿರಲು ಕಾರಣಗಳೇನು ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಧ್ಯಮ ಮಾಡಬೇಕು ಎಂದರು.

ಬಹಳಷ್ಟು ಜನರು ಸಂವಿಧಾನವನ್ನೇ ಓದಿರುವುದಿಲ್ಲ ಇದೇ ಕಾರಣಕ್ಕೆ ನಮ್ಮ ಸರ್ಕಾರ, ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವಂತಹ ಕಾರ್ಯಕ್ರಮ ಹಮ್ಮಿಕೊಂಡಿತು ಸಂವಿಧಾನದ ಕರ್ತವ್ಯಗಳನ್ನು, ಹಕ್ಕುಗಳನ್ನು ತಿಳಿದುಕೊಂಡಲ್ಲಿ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಸಹಾಯಕವಾಗುತ್ತದೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕೆಲಸ ಮಾಡಿದರೆ ಸಮಾಜ, ನಾಡು ದೇಶ ಎಲ್ಲಕ್ಕೂ ಒಳ್ಳೆಯದಾಗುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

9 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

13 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

13 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

13 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

14 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

14 hours ago