ರಾಜ್ಯ

ಸಾಮಾಜಿಕ ನ್ಯಾಯದ ಬಗ್ಗೆ ಮಾಧ್ಯಮಗಳು ಜನರಲ್ಲಿ ಜಾಗೃತಿ ಮೂಡಿಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.

ಅವರು ಇಂದು ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2024ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ 2017 ರಿಂದ 2023ನೇ ಕ್ಯಾಲೆಂಡರ್ ವರ್ಷದ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಭಾಗವಹಿಸಿ ಮಾತನಾಡಿದರು.

ಅಭಿಪ್ರಾಯಗಳು ವಸ್ತುಸ್ಥಿತಿಯಿಂದ ಕೂಡಿರಬೇಕು. ಅನೇಕ ಬಾರಿ ಊಹಾ ಪತ್ರಿಕೋದ್ಯಮ ಆಗಿರುತ್ತದೆ, ಅದು ಆಗಬಾರದು. ಸತ್ಯ ಅಸತ್ಯಗಳನ್ನು ಪತ್ತೆ ಹಚ್ಚಿ, ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು. ಯಾವುದೇ ಕಾರಣಕ್ಕೂ ಒಬ್ಬ ವ್ಯಕ್ತಿಯು ತಪ್ಪು ಮಾಡದಿದ್ದರೂ, ಸುಮ್ಮನೆ ಆರೋಪಗಳನ್ನು ಮಾಡಬಾರದು. ಸರ್ಕಾರದಲ್ಲಿ ಎಲ್ಲವೂ ಸರಿಯಾಗಿರುವುದಿಲ್ಲ ನಿಜ, ಆದರೆ ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನ ವಿರೋಧಿ ಕಾರ್ಯವನ್ನು ಸರ್ಕಾರ ಮಾಡಿದರೆ ಅದನ್ನೂ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು.

ಸಮಾಜದಲ್ಲಿ ಜಾತಿ ವ್ಯವಸ್ಥೆ, ಅಸಮಾನತೆ ಇದೆ. ಸಾಮಾಜಿಕ ಅಸಮಾನತೆ ಬಗ್ಗೆ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು. ಬಹುಸಂಖ್ಯಾತರಾಗಿರುವ ಜನ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವುದು ಅಸಮಾನತೆಗೆ ಪ್ರಮುಖ ಕಾರಣ. ಇದನ್ನು ನೇರವಾಗಿ ಜನರಿಗೆ ತಿಳಿಸುವ ಪ್ರಯತ್ನದಲ್ಲಿ, ಯಾವುದೇ ರಾಜಿ ಇಲ್ಲದೆ, ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಕ್ಕಿದೆಯೇ, ಇಲ್ಲವೇ, ಸಮಬಾಳು, ಸಮಪಾಲು ಅನುಷ್ಠಾನಕ್ಕೆ ಬಂದಿದೆಯೇ ಎಂಬುದನ್ನು ಪರಿಶೀಲಿಸಬೇಕು. ಸಾಮಾಜಿಕ ನ್ಯಾಯ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿರಬೇಕಾದ ವಿಚಾರವಲ್ಲ. ಎಲ್ಲರಿಗೂ ದೇಶದ ವ್ಯವಸ್ಥೆಯಲ್ಲಿ ಇನ್ನೂ ಸಹ ಸಮಾನವಾದ ಅವಕಾಶ ಸಿಗದಿರಲು ಕಾರಣಗಳೇನು ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಧ್ಯಮ ಮಾಡಬೇಕು ಎಂದರು.

ಬಹಳಷ್ಟು ಜನರು ಸಂವಿಧಾನವನ್ನೇ ಓದಿರುವುದಿಲ್ಲ ಇದೇ ಕಾರಣಕ್ಕೆ ನಮ್ಮ ಸರ್ಕಾರ, ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವಂತಹ ಕಾರ್ಯಕ್ರಮ ಹಮ್ಮಿಕೊಂಡಿತು ಸಂವಿಧಾನದ ಕರ್ತವ್ಯಗಳನ್ನು, ಹಕ್ಕುಗಳನ್ನು ತಿಳಿದುಕೊಂಡಲ್ಲಿ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಸಹಾಯಕವಾಗುತ್ತದೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕೆಲಸ ಮಾಡಿದರೆ ಸಮಾಜ, ನಾಡು ದೇಶ ಎಲ್ಲಕ್ಕೂ ಒಳ್ಳೆಯದಾಗುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

6 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

6 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

6 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

6 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

6 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

6 hours ago