ರಾಜ್ಯ

ಅಭಿಪ್ರಾಯರೂಪಿಸುವ ಶಕ್ತಿಯನ್ನು ಮಾಧ್ಯಮಗಳು ಸದ್ಬಳಕೆ ಮಾಡಬೇಕು : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಸಾರ್ವಜನಿಕ ಅಭಿಪ್ರಾಯ ರೂಪಿಸುವ ಶಕ್ತಿ ಮಾಧ್ಯಮಗಳಿಗಿದ್ದು, ಈ ಶಕ್ತಿಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಘಟಕದ ಉದ್ಘಾಟನೆ ಹಾಗೂ ಪತ್ರಿಕಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕೋಮು ಘರ್ಷಣೆ, ಜಾತಿ, ಜನಾಂಗೀಯ ಸಂಘರ್ಷವೇ ಮೊದಲಾದ ಸೂಕ್ಷ್ಮ ವಿಚಾರಗಳ ವರದಿಗಾರಿಕೆಯಲ್ಲಿ ಮಾಧ್ಯಮಗಳು ಸೂಕ್ಷ್ಮ ಸಂವೇದನೆ ಹೊಂದಿರಬೇಕು. ಪ್ರಚೋದನಕಾರಿಯಾದ ವರದಿಗೆ ಕಡಿವಾಣ ಹಾಕಬೇಕು ಎಂದರು.

ಶಾಸಕಾಂಗ, ನ್ಯಾಯಾಂಗ ಮತ್ತು ಕಾರ್ಯಾಂಗವನ್ನು ಒಳಗೊಂಡಿದ್ದೆ ನಮ್ಮ ಆಡಳಿತ ವ್ಯವಸ್ಥೆ. ಈ ವ್ಯವಸ್ಥೆಯಲ್ಲಿ ಪತ್ರಿಕಾಂಗ ಅಥವಾ ಮಾಧ್ಯಮ ರಂಗಕ್ಕೆ ಮಹತ್ವದ ಸ್ಥಾನ ನೀಡಲಾಗಿದ್ದು, ಸಮಾಜದ ನಾಲ್ಕನೇ ಅಂಗ ಎಂದೂ ಪರಿಗಣಿಸಲಾಗಿದೆ ಎಂದರು.

ಅನಕ್ಷರತೆಯ ನಡುವೆಯೂ ಸ್ವಾತಂತ್ರ್ಯ ಸಂಗ್ರಾಮದ ಕಾಲದಲ್ಲಿ ಪತ್ರಿಕೆಗಳು ನಿರ್ವಹಿಸಿದ ಪಾತ್ರ ಅತ್ಯಂತ ಮಹತ್ವವಾದ್ದು. ಜನರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚುವಲ್ಲಿ ದೇಶಪ್ರೇಮ ಮೂಡಿಸುವಲ್ಲಿ ಮಹಾತ್ಮಾ ಗಾಂಧೀ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್, ಬಾಲ ಗಂಗಾಧರ ತಿಲಕರೇ ಮೊದಲಾದವರು ಹೊರತರುತ್ತಿದ್ದ ಪತ್ರಿಕೆಗಳ ಕೊಡುಗೆ ಅನನ್ಯವಾದ್ದು ಎಂದರು.

ಭಾರತದಲ್ಲಿ 1780ರಲ್ಲಿ ಆರಂಭವಾದ ಮೊದಲ ಪತ್ರಿಕೆ ‘ದಿ ಬೆಂಗಾಲ್ ಗೆಜೆಟ್’ ಹೀಗಾಗಿ ಭಾರತೀಯ ಪತ್ರಿಕೋದ್ಯಮಕ್ಕೆ 245 ವರ್ಷಗಳ ಸುದೀರ್ಘ ಇತಿಹಾಸ ಇದೆ. ಅದೇ ರೀತಿ ಮಂಗಳೂರು ಸಮಾಚಾರ ಪತ್ರಿಕೆ 1843 ಜುಲೈ 1ರಂದು ಆರಂಭವಾಗಿದ್ದು, ಕನ್ನಡ ಪತ್ರಿಕೋದ್ಯಮಕ್ಕೆ 182ವರ್ಷಗಳ ಭವ್ಯ ಇತಿಹಾಸ ಇದೆ ಎಂದರು.

ಕನ್ನಡ ಪತ್ರಿಕೋದ್ಯಮಕ್ಕೆ ತಿ.ತಾ. ಶರ್ಮಾ, ಮೊಹರೆ ಹಣಮಂತರಾಯರು, ಖಾದ್ರಿ ಶಾಮಣ್ಣನವರು, ಆರ್.ಆರ್. ದಿವಾಕರ್ ಮೊದಲಾದವರು ಕೊಡುಗೆ ನೀಡಿದ್ದಾರೆ ಎಂದ ಅವರು, ಲೇಖನಿ ಖಡ್ಗಕ್ಕಿಂತ ಹರಿತ. ಆದರೆ ಆ ಹರಿತವಾದ ಲೇಖನಿಯನ್ನು ಸಮರ್ಪಕ ರೀತಿಯಲ್ಲಿ ಬಳಸುವುದು ಅಗತ್ಯ ಎಂದು ತಿಳಿಸಿದರು.

ಮಾಧ್ಯಮಗಳು ಜನ ಜಾಗೃತಿ ಮೂಡಿಸಬೇಕು
ನೀರಲ್ಲಿ ಕರಗದ ಪ್ಲಾಸ್ಟರಾಫ್ ಪ್ಯಾರೀಸ್ (ಪಿಓಪಿ) ಗಣಪತಿ ಮೂರ್ತಿಗಳನ್ನು ನೀರಲ್ಲಿ ವಿಸರ್ಜನೆ ಮಾಡುವುದನ್ನು ಹಾಗೂ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳನ್ನು ನಿಷೇಧಿಸಲಾಗಿದೆ. ಆದಾಗ್ಯೂ ಅವುಗಳ ಬಳಕೆ ವ್ಯಾಪಕವಾಗಿದೆ. ಪರಿಸರಕ್ಕೆ ಮಾರಕವಾದ ಇಂತಹ ವಸ್ತುಗಳ ಬಳಕೆ ತ್ಯಜಿಸುವಂತೆ ಮಾಧ್ಯಮಗಳು ಜನಜಾಗೃತಿ ಮೂಡಿಸಬೇಕು ಎಂದರು.

11 ಕೋಟಿ ಸಸಿ ನೆಟ್ಟ ಸಾಧನೆ
ಅರಣ್ಯ ಇಲಾಖೆಯ ಜವಾಬ್ದಾರಿಯನ್ನು ತಾವು ವಹಿಸಿಕೊಂಡ ಬಳಿಕ 2.3 ವರ್ಷಗಳಲ್ಲಿ ರಾಜ್ಯದಲ್ಲಿ 11ಕೋಟಿ ಸಸಿಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಿರುವುದಾಗಿ ಅವರು ತಿಳಿಸಿದರು.

ಮಾಧ್ಯಮಶ್ರೀ ಮತ್ತು ಜೀವಮಾನ ಪ್ರಶಸ್ತಿಗೆ ಭಾಜನರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮತ್ತಿತರರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

3 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

3 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

3 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

16 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

18 hours ago