ರಾಜ್ಯ

ವೈಧ್ಯಕೀಯ ಶಿಕ್ಷಕರಿಗೆ ವಿಶೇಷ ಸ್ಥಾನಮಾನ ಅಗತ್ಯ: ಡಾ.ಶರಣ್‌ ಪ್ರಕಾಶ್‌ ಪಾಟೀಲ್‌

ಶಿಕ್ಷಕರು ಸಮಾಜದ ನಿಜವಾದ ಶಿಲ್ಪಿಗಳು: ಡಾ. ಶರಣ್ ಪ್ರಕಾಶ್ ಪಾಟೀಲ್

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ಬೆಂಗಳೂರು: ಯಾವುದೇ ಶಿಕ್ಷಣ ಸಂಸ್ಥೆಯ ಮೂಲಾಧಾರಗಳೆಂದರೆ ಶಿಕ್ಷಕರು. ಅವರು ಯುವ ಮನಸ್ಸುಗಳನ್ನು ರೂಪಿಸುವುದು, ಆಲೋಚಿಸಲು, ಸಂಸ್ಕಾರ, ಸಂಸ್ಕೃತಿ, ಮಾನವೀಯತೆಯ ಪಾಠವನ್ನು ಹೇಳಿಕೊಟ್ಟು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ರೂವಾರಿಗಳಾಗಿರುತ್ತಾರೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.

ನಗರದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಧನ್ವಂತರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಿಕ್ಷಣ ತಜ್ಞರು ಈ ದೇಶದಲ್ಲಿ ಆರೋಗ್ಯ ರಕ್ಷಣೆಯ ಭವಿಷ್ಯವನ್ನು ರೂಪಿಸುತ್ತಿದ್ದಾರೆ. ಅಂಥ ಕೆಲವು ಉತ್ತಮ ಮತ್ತು ಅತ್ಯುತ್ತಮ ಶಿಕ್ಷಕರು ಇಲ್ಲಿಯ ಸಂಸ್ಥೆಯಲ್ಲಿರುವುದು ನಿಜಕ್ಕೂ ಹೆಮ್ಮೆ ಎನಿಸುತ್ತದೆ ಎಂದು ತಿಳಿಸಿದರು.

ವೈದ್ಯಕೀಯ ಶಿಕ್ಷಣದಲ್ಲಿ, ಶಿಕ್ಷಕರನ್ನು ಗುರುತಿಸುವುದು ಮತ್ತು ಪ್ರಶಸ್ತಿ ನೀಡುವುದು ಅತ್ಯಗತ್ಯ. ಶ್ರೇಷ್ಠತೆ ಮತ್ತು ಆರೋಗ್ಯ ವ್ಯವಸ್ಥೆಯ ನಿರಂತರ ಬೆಳವಣಿಗೆಯನ್ನು ಖಾತ್ರಿಪಡಿಸುವುದು ನಮ್ಮ ಮುಖ್ಯ ಗುರಿಯಾಗಿದೆ. ವೈದ್ಯಕೀಯ ಶಿಕ್ಷಣ, ಇತರ ಹಲವು ಕ್ಷೇತ್ರಗಳಿಗಿಂತ ಭಿನ್ನವಾಗಿದ್ದು, ಹೆಚ್ಚು ಬದ್ಧತೆಯ ಕ್ಷೇತ್ರವಾಗಿದೆ. ಈ ನಿಟ್ಟಿನಲ್ಲಿ ಇಲ್ಲಿ ಗರಿಷ್ಠ ಬದ್ಧತೆ ಅಗತ್ಯವಿದೆ ಎಂದು ಸಚಿವರು ಹೇಳಿದರು.

ಶಿಕ್ಷಣ ತಜ್ಞರು, ಅವರು ಜ್ಞಾನ ದಾನ ಮಾಡುವುದಲ್ಲದೇ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಾರೆ. ಕ್ಲಿನಿಕಲ್ ಕೌಶಲ್ಯಗಳು, ನೈತಿಕ ಮೌಲ್ಯಗಳು ಮತ್ತು ಸಹಾನುಭೂತಿಯ ಆರೈಕೆ ಬಗ್ಗೆ ಮನದಟ್ಟು ಮಾಡುತ್ತಾರೆ. ಅಂಥವರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುವುದರ ಮೂಲಕ ಅವರ ಕೊಡುಗೆಗಳನ್ನು ಸ್ಮರಿಸೋಣ ಎಂದರು.

ವಿವಿಯ ಅಂಗಸಂಸ್ಥೆಯ ಎಲ್ಲಾ ಶಿಕ್ಷಕರಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಇದೀಗ 10,000 ಕ್ಕಿಂತ ಹೆಚ್ಚು ಶಿಕ್ಷಕರು ತರಬೇತಿ ಪಡೆದಿದ್ದಾರೆ. ಇನ್ನೂ 30,000ಕ್ಕೂ ಹೆಚ್ಚು ಶಿಕ್ಷಕರಿಗೆ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು.

ಸಮಾರಂಭದದಲ್ಲಿ ಡಾ. ಕೆ.ವಿ. ಅಶೋಕ್ ಕುಮಾರ್, ಡಾ. ಎ.ಆರ್. ರಘುಪತಿ, ಡಾ. ಸದಾಶಿವ ಶೆಟ್ಟಿ, ಡಾ. ಆಶಾಲತಾ, ಡಾ. ಎಸ್.ಕೆ. ತಿವಾರಿ ಅವರಿಗೆ “ಪ್ರೊಫೆಸರ್ ಎಮೆರಿಟಸ್” ಪ್ರಶಸ್ತಿ ಪ್ರದಾನ ಮಾಡಲಾಯಿತು.

ಡಾ. ವಿ. ರಾಜಗೋಪಾಲ್, ಡಾ. ದುರ್ಗಣ್ಣ ಟಿ., ಡಾ. ದಿನೇಶ್ ರಾಮು, ಡಾ. ಶೋಭಾರಾಣಿ ಆರ್. ಹಿರೇಮಠ, ಡಾ. ಉಮೇಶ್ ವಿ. ಪುರದ್, ಡಾ. ಸುಚೇತಾ ಕಾಂತ, ಡಾ. ಕೆ. ರೆಡ್ಡೆಮ್ಮ, ಡಾ. ಎನ್.ಎಸ್. ಪ್ರಕಾಶ್ ಅವರಿಗೆ “ಆರೋಗ್ಯ ವಿಜ್ಞಾನಗಳ ಶ್ರೇಷ್ಠ ಶಿಕ್ಷಕ” ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ. ರಮೇಶ್, ಕುಲಸಚಿವ ಶಿವಪ್ರಸಾದ್ ಪಿ ಆರ್, ಡಾ. ರಿಯಾಜ್ ಬಾಷಾ ಮತ್ತು ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು,

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

43 mins ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

3 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

3 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

3 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

3 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

5 hours ago