ರಾಜ್ಯ

ವೈಧ್ಯಕೀಯ ಶಿಕ್ಷಕರಿಗೆ ವಿಶೇಷ ಸ್ಥಾನಮಾನ ಅಗತ್ಯ: ಡಾ.ಶರಣ್‌ ಪ್ರಕಾಶ್‌ ಪಾಟೀಲ್‌

ಶಿಕ್ಷಕರು ಸಮಾಜದ ನಿಜವಾದ ಶಿಲ್ಪಿಗಳು: ಡಾ. ಶರಣ್ ಪ್ರಕಾಶ್ ಪಾಟೀಲ್

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ಬೆಂಗಳೂರು: ಯಾವುದೇ ಶಿಕ್ಷಣ ಸಂಸ್ಥೆಯ ಮೂಲಾಧಾರಗಳೆಂದರೆ ಶಿಕ್ಷಕರು. ಅವರು ಯುವ ಮನಸ್ಸುಗಳನ್ನು ರೂಪಿಸುವುದು, ಆಲೋಚಿಸಲು, ಸಂಸ್ಕಾರ, ಸಂಸ್ಕೃತಿ, ಮಾನವೀಯತೆಯ ಪಾಠವನ್ನು ಹೇಳಿಕೊಟ್ಟು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ರೂವಾರಿಗಳಾಗಿರುತ್ತಾರೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.

ನಗರದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಧನ್ವಂತರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಿಕ್ಷಣ ತಜ್ಞರು ಈ ದೇಶದಲ್ಲಿ ಆರೋಗ್ಯ ರಕ್ಷಣೆಯ ಭವಿಷ್ಯವನ್ನು ರೂಪಿಸುತ್ತಿದ್ದಾರೆ. ಅಂಥ ಕೆಲವು ಉತ್ತಮ ಮತ್ತು ಅತ್ಯುತ್ತಮ ಶಿಕ್ಷಕರು ಇಲ್ಲಿಯ ಸಂಸ್ಥೆಯಲ್ಲಿರುವುದು ನಿಜಕ್ಕೂ ಹೆಮ್ಮೆ ಎನಿಸುತ್ತದೆ ಎಂದು ತಿಳಿಸಿದರು.

ವೈದ್ಯಕೀಯ ಶಿಕ್ಷಣದಲ್ಲಿ, ಶಿಕ್ಷಕರನ್ನು ಗುರುತಿಸುವುದು ಮತ್ತು ಪ್ರಶಸ್ತಿ ನೀಡುವುದು ಅತ್ಯಗತ್ಯ. ಶ್ರೇಷ್ಠತೆ ಮತ್ತು ಆರೋಗ್ಯ ವ್ಯವಸ್ಥೆಯ ನಿರಂತರ ಬೆಳವಣಿಗೆಯನ್ನು ಖಾತ್ರಿಪಡಿಸುವುದು ನಮ್ಮ ಮುಖ್ಯ ಗುರಿಯಾಗಿದೆ. ವೈದ್ಯಕೀಯ ಶಿಕ್ಷಣ, ಇತರ ಹಲವು ಕ್ಷೇತ್ರಗಳಿಗಿಂತ ಭಿನ್ನವಾಗಿದ್ದು, ಹೆಚ್ಚು ಬದ್ಧತೆಯ ಕ್ಷೇತ್ರವಾಗಿದೆ. ಈ ನಿಟ್ಟಿನಲ್ಲಿ ಇಲ್ಲಿ ಗರಿಷ್ಠ ಬದ್ಧತೆ ಅಗತ್ಯವಿದೆ ಎಂದು ಸಚಿವರು ಹೇಳಿದರು.

ಶಿಕ್ಷಣ ತಜ್ಞರು, ಅವರು ಜ್ಞಾನ ದಾನ ಮಾಡುವುದಲ್ಲದೇ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಾರೆ. ಕ್ಲಿನಿಕಲ್ ಕೌಶಲ್ಯಗಳು, ನೈತಿಕ ಮೌಲ್ಯಗಳು ಮತ್ತು ಸಹಾನುಭೂತಿಯ ಆರೈಕೆ ಬಗ್ಗೆ ಮನದಟ್ಟು ಮಾಡುತ್ತಾರೆ. ಅಂಥವರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುವುದರ ಮೂಲಕ ಅವರ ಕೊಡುಗೆಗಳನ್ನು ಸ್ಮರಿಸೋಣ ಎಂದರು.

ವಿವಿಯ ಅಂಗಸಂಸ್ಥೆಯ ಎಲ್ಲಾ ಶಿಕ್ಷಕರಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಇದೀಗ 10,000 ಕ್ಕಿಂತ ಹೆಚ್ಚು ಶಿಕ್ಷಕರು ತರಬೇತಿ ಪಡೆದಿದ್ದಾರೆ. ಇನ್ನೂ 30,000ಕ್ಕೂ ಹೆಚ್ಚು ಶಿಕ್ಷಕರಿಗೆ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು.

ಸಮಾರಂಭದದಲ್ಲಿ ಡಾ. ಕೆ.ವಿ. ಅಶೋಕ್ ಕುಮಾರ್, ಡಾ. ಎ.ಆರ್. ರಘುಪತಿ, ಡಾ. ಸದಾಶಿವ ಶೆಟ್ಟಿ, ಡಾ. ಆಶಾಲತಾ, ಡಾ. ಎಸ್.ಕೆ. ತಿವಾರಿ ಅವರಿಗೆ “ಪ್ರೊಫೆಸರ್ ಎಮೆರಿಟಸ್” ಪ್ರಶಸ್ತಿ ಪ್ರದಾನ ಮಾಡಲಾಯಿತು.

ಡಾ. ವಿ. ರಾಜಗೋಪಾಲ್, ಡಾ. ದುರ್ಗಣ್ಣ ಟಿ., ಡಾ. ದಿನೇಶ್ ರಾಮು, ಡಾ. ಶೋಭಾರಾಣಿ ಆರ್. ಹಿರೇಮಠ, ಡಾ. ಉಮೇಶ್ ವಿ. ಪುರದ್, ಡಾ. ಸುಚೇತಾ ಕಾಂತ, ಡಾ. ಕೆ. ರೆಡ್ಡೆಮ್ಮ, ಡಾ. ಎನ್.ಎಸ್. ಪ್ರಕಾಶ್ ಅವರಿಗೆ “ಆರೋಗ್ಯ ವಿಜ್ಞಾನಗಳ ಶ್ರೇಷ್ಠ ಶಿಕ್ಷಕ” ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ. ರಮೇಶ್, ಕುಲಸಚಿವ ಶಿವಪ್ರಸಾದ್ ಪಿ ಆರ್, ಡಾ. ರಿಯಾಜ್ ಬಾಷಾ ಮತ್ತು ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು,

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

20 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

20 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

20 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

20 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

20 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

23 hours ago