ರಾಮನಗರ: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಾಯಿ ಮೀನಾ ತೂಗುದೀಪ ಅವರಿಂದು ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಚನ್ನಪಟ್ಟಣ ತಾಲ್ಲೂಕಿನ ಗೌಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಚಾಮುಂಡೇಶ್ವರಿ ವಿಗ್ರಹದ ದೇವಾಲಯದಲ್ಲಿ ಮೀನಾ ತೂಗುದೀಪ ಅವರು ಪವಾಡ ಬಸಪ್ಪನ ಆಶೀರ್ವಾದ ಪಡೆದರು.
ಮಗ ದರ್ಶನ್ಗೆ ಎದುರಾಗಿರುವ ಸಂಕಷ್ಟಗಳನ್ನು ನಿವಾರಣೆ ಮಾಡುವಂತೆ ಪವಾಡ ಬಸಪ್ಪನ ಬಳಿ ಪ್ರಾರ್ಥನೆ ಮಾಡಿದ ಮೀನಾಗೆ ಬಸಪ್ಪ ಬಲಗಾಲು ನೀಡಿ ಆಶೀರ್ವಾದ ಮಾಡಿದೆ.
ದೇವಾಲಯಕ್ಕೆ ಆಗಮಿಸಿದ್ದ ಮೀನಾ ತೂಗುದೀಪ್ ಅವರಿಗೆ ದೇವಾಲಯದ ಆಡಳಿತ ಮಂಡಳಿಯಿಂದ ಗೌರವ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಚಾಮುಂಡೇಶ್ವರಿ ನೆಲೆಸಿದ್ದಾಳೆ. ಇಲ್ಲಿ ಎಲ್ಲಾ ಕಡೆ ಪಾಸಿಟಿವ್ ಎನರ್ಜಿ ಇದೆ. ಹಾಗಾಗಿ ಇಲ್ಲಿಗೆ ಬಂದು ತಾಯಿಯ ದರ್ಶನ ಪಡೆದಿದ್ದೇನೆ. ಇಲ್ಲಿ ಬರುವ ಎಲ್ಲರಿಗೂ ತಾಯಿ ಚಾಮುಂಡೇಶ್ವರಿ ಒಳ್ಳೆಯದನ್ನು ಮಾಡಲಿ ಎಂದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…