ರಾಮನಗರ: ನಗರದಲ್ಲಿಂದು ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ ಪರ ಬೃಹತ್ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತಾಡಿದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಮಳೆಯಿಲ್ಲದೆ ಕೆರೆ ಕುಂಟೆಗಳು, ಬೋರ್ ವೆಲ್ ಗಳು ಬತ್ತಿ ಹೋಗಿವೆ, ನೀರಿಗಾಗಿ ಹಾಹಾಕಾರ ಸೃಷ್ಟಿಯಾಗಿದೆ, ರಾಮನಗರವನ್ನು ಉದ್ಧಾರ ಮಾಡುತ್ತೇನೆಂದು ಹೇಳಿದ್ದ ಶಿವಕುಮಾರ್ ಎಲ್ಲಿದ್ದಾರೆ ಎಂದು ಯೋಗೇಶ್ವರ್ ಪ್ರಶ್ನಿಸಿದರು. ಕೇವಲ ಜನರನ್ನು ಮೆಚ್ಚಿಸಲು ಮತ್ತು ವೋಟು ಗಿಟ್ಟಿಸಲು ಶಿವಕುಮಾರ್ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದರು ಎಂದು ಯೋಗೇಶ್ವರ್ ಕಿಡಿಕಾರಿದರು.
ಕಾಂಗ್ರೆಸ್ ಪಕ್ಷದ ರಾಕ್ಷಸ ಸಂಸ್ಕೃತಿಯನ್ನು ಸಂಹಾರ ಮಾಡಲೆಂದೇ ದೇವೇಗೌಡ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು ಒಂದುಗೂಡಿಸಿದ್ದಾರೆ ಎಂದರು. ಎರಡು ಪಕ್ಷಗಳ ಕಾರ್ಯಕರ್ತರು ಒಟ್ಟಾಗಿ ದುಡಿಯುತ್ತಿರುವುದರಿಂದ ಸೋಲಿನಿಂದ ತಪ್ಪಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಿಲ್ಲ ಎಂದು ಅವರು ಹೇಳಿದರು.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…