ಮೈಸೂರು : ಪಾಂಡವಪುರದಲ್ಲಿ ನಡೆದ ಆರೆಸ್ಸೆಸ್ ಕಾರ್ಯಾಲಯ ಉದ್ಘಾಟನೆ ಸಮಾರಂಭದಲ್ಲಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭಾಗವಹಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.
ಶ್ರೀ ಜನಜಾಗರಣ ಟ್ರಸ್ಟ್ (ರಿ) ಇದರ ಪಾಂಡವಪುರ ಘಟಕ ವತಿಯಿಂದ ಪಾಂಡವಪುರದಲ್ಲಿ ನಿರ್ಮಿಸಿರುವ ನೂತನ ಮಣಿಕರ್ಣಿಕ ನಿಲಯ (ಆರೆಸ್ಸೆಸ್ ಕಾರ್ಯಾಲಯ) ಹೊಸ ಕಟ್ಟಡದ ಗಣಹೋಮ ಮತ್ತು ಶ್ರೀ ರಾಮತಾರಕ ಹೋಮ ಕಾರ್ಯಕ್ರಮದಲ್ಲಿ ಭಾಗವಸಿರುವ ಬಗ್ಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತನ್ನ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಿ. ಎಸ್ ಪುಟ್ಟರಾಜು ಹಾಗೂ ಸಂಘದ ಪ್ರಮುಖರು ಉಪಸ್ಥಿತರಿದ್ದರು ಎಂದು ಉಲ್ಲೇಖಿಸಿರುವ ದರ್ಶನ್ ಪುಟ್ಟಣ್ಣಯ್ಯ, ಕಾರ್ಯಕ್ರಮದ ಕೆಲವು ಫೋಟೊಗಳನ್ನೂ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.
ರೈತ ನಾಯಕ, ಮಾಜಿ ಶಾಸಕ ದಿವಂಗತ ಕೆ.ಎಸ್.ಪುಟ್ಟಣ್ಣಯ್ಯರ ಪುತ್ರರಾಗಿರುವ ದರ್ಶನ್ ಪುಟ್ಟಣ್ಣಯ್ಯ ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದಕ್ಕೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ದರ್ಶನ್ ರ ಫೇಸ್ ಬುಕ್ ಪೋಸ್ಟ್ ಗೆ ಕಮೆಂಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ದರ್ಶನ್ ಪುಟ್ಟಣ್ಣಯ್ಯ ಅಮೆರಿಕದಲ್ಲಿ ಇದ್ದು ತನ್ನ ಹೆಸರಿನ ಮುಂದೆ ಇರುವ ‘ಪುಟ್ಟಣ್ಣಯ್ಯ’ ಅವರ ಹೆಸರಿನ ಘನತೆ ಆದರೂ ಉಳಿಸಬಹುದಿತ್ತು” ಕೆಲವರು ಅಸಮಾಧಾನ ಹೊರ ಹಾಕಿದ್ದಾರೆ.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…