ಮೈಸೂರು : ಪಾಂಡವಪುರದಲ್ಲಿ ನಡೆದ ಆರೆಸ್ಸೆಸ್ ಕಾರ್ಯಾಲಯ ಉದ್ಘಾಟನೆ ಸಮಾರಂಭದಲ್ಲಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭಾಗವಹಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.
ಶ್ರೀ ಜನಜಾಗರಣ ಟ್ರಸ್ಟ್ (ರಿ) ಇದರ ಪಾಂಡವಪುರ ಘಟಕ ವತಿಯಿಂದ ಪಾಂಡವಪುರದಲ್ಲಿ ನಿರ್ಮಿಸಿರುವ ನೂತನ ಮಣಿಕರ್ಣಿಕ ನಿಲಯ (ಆರೆಸ್ಸೆಸ್ ಕಾರ್ಯಾಲಯ) ಹೊಸ ಕಟ್ಟಡದ ಗಣಹೋಮ ಮತ್ತು ಶ್ರೀ ರಾಮತಾರಕ ಹೋಮ ಕಾರ್ಯಕ್ರಮದಲ್ಲಿ ಭಾಗವಸಿರುವ ಬಗ್ಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತನ್ನ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಿ. ಎಸ್ ಪುಟ್ಟರಾಜು ಹಾಗೂ ಸಂಘದ ಪ್ರಮುಖರು ಉಪಸ್ಥಿತರಿದ್ದರು ಎಂದು ಉಲ್ಲೇಖಿಸಿರುವ ದರ್ಶನ್ ಪುಟ್ಟಣ್ಣಯ್ಯ, ಕಾರ್ಯಕ್ರಮದ ಕೆಲವು ಫೋಟೊಗಳನ್ನೂ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.
ರೈತ ನಾಯಕ, ಮಾಜಿ ಶಾಸಕ ದಿವಂಗತ ಕೆ.ಎಸ್.ಪುಟ್ಟಣ್ಣಯ್ಯರ ಪುತ್ರರಾಗಿರುವ ದರ್ಶನ್ ಪುಟ್ಟಣ್ಣಯ್ಯ ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದಕ್ಕೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ದರ್ಶನ್ ರ ಫೇಸ್ ಬುಕ್ ಪೋಸ್ಟ್ ಗೆ ಕಮೆಂಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ದರ್ಶನ್ ಪುಟ್ಟಣ್ಣಯ್ಯ ಅಮೆರಿಕದಲ್ಲಿ ಇದ್ದು ತನ್ನ ಹೆಸರಿನ ಮುಂದೆ ಇರುವ ‘ಪುಟ್ಟಣ್ಣಯ್ಯ’ ಅವರ ಹೆಸರಿನ ಘನತೆ ಆದರೂ ಉಳಿಸಬಹುದಿತ್ತು” ಕೆಲವರು ಅಸಮಾಧಾನ ಹೊರ ಹಾಕಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…