ರಾಜ್ಯ

ರಾಜ್ಯದ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಬೇಡಿ: ಶಾಸಕ ಯತ್ನಾಳ್‌ ಕರೆ

ವಿಜಯಪುರ: ಕರ್ನಾಟಕದ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರಕ್ಕೆ ಮತ ಹಾಕಬಾರದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕರೆ ನೀಡಿದ್ದಾರೆ.

ಈ ಬಗ್ಗೆ ವಿಜಯಪುರ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಸ್‌ ಟಿಕೆಟ್‌ ಪ್ರಯಾಣದ ದರವನ್ನು 15% ಹೆಚ್ಚಳ ಮಾಡುವ ಮೂಲಕ ರಾಜ್ಯದ ಗಂಡಸರಿಗೆ ತುಂಬಾ ಅನ್ಯಾಯ ಮಾಡಿದೆ. ಹೆಣ್ಣು ಮಕ್ಕಳಿಗೆ ಉಚಿತ ನೀಡಿ, ಗಂಡು ಮಕ್ಕಳಿಗೆ ಹೆಚ್ಚಿನ ದುಡ್ಡು ಹಾಕಿದ್ದಾರೆ. ಇದು ಹೆಣ್ಣು ಮಕ್ಕಳಿಗೂ ಅನ್ಯಾಯವಾಗುವಂತೆ ಕಾಣುತ್ತಿದೆ. ನಿಮ್ಮ ಗಂಡು ಮಕ್ಕಳನ್ನು ರಕ್ಷಣೆ ಮಾಡಬೇಕು ಅಂದರೆ ಮುಂದಿನ ಬಾರಿ ನಡೆಯುವ ಚುನಾವಣೆಯಲ್ಲಿ ಹೆಣ್ಣು ಮಕ್ಕಳು ಸಹ ಕಾಂಗ್ರೆಸ್‌ಗೆ ಮತ ನೀಡಬಾರದು ಎಂದು ಕರೆ ನೀಡಿದರು.

ಇನ್ನು ಕಲಬುರಿ ಪ್ರತಿಭಟನೆಗೆ ವಿಜಯೇಂದ್ರ ಭಾಗಿ ಆಗದ ವಿಚಾರಕ್ಕೆ ಪ್ರತಿಕ್ರಿಯಿಸದ ಅವರು, ವಿಜಯೇಂದ್ರ ನೇತೃತ್ವದಲ್ಲಿ ಎಲ್ಲಾ ಕಡೆ ಪ್ರತಿಭಟನೆ ಎಂದು ಹೇಳಿಕೊಂಡಿದ್ದರು. ಆದರೆ ರಾಜ್ಯಾದ್ಯಂತ ಪ್ರತಿಭಟನೆ ಇದ್ದ ಕಾರಣ ಪಾಪ ಅವರು ಯಾವ ಕಡೆ ಹೋಗುತ್ತಾರೆ. ಬಾಣಂತಿಯರ ಸಾವು ಪ್ರಕರಣದ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಇದರಿಂದ ಸಾಮೂಹಿಕ ನಾಯಕತ್ವ ಹೇಗಿದೆ ಎನ್ನುವುದು ಗೊತ್ತಾಗುತ್ತದೆ ಎಂದು ಹೇಳಿದರು.

ಇನ್ನು ವಿಜಯೇಂದ್ರ ಹಾಗೂ ಆರ್‌.ಅಶೋಕ್‌ ಮಧ್ಯೆ ಹೊಂದಾಣಿಕೆ ಕೊರತೆ ವಿಚಾರವಾಗಿ ಮಾತನಾಡಿದ ಅವರು, ಹಾಗೇನಿಲ್ಲ, ಆರ್‌.ಅಶೋಕ್‌ ಅವರು ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಾರೆ. ಅವರ ಬಗ್ಗೆ ಯಾವ ಆರೋಪಗಳೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಚುನಾವಣಾ ಪ್ರಕ್ರಿಯೆ ಇದ್ದೆ ಇರುತ್ತದೆ. ಕೇಂದ್ರದ ಹೈಕಮಾಂಡ್‌ ಆಯ್ಕೆಯೇ ಅಂತಿಮ. ರಾಜ್ಯ ಮತ್ತು ಕೇಂದ್ರದ ಹಿರಿಯರು ಸಹಮತದೊಂದಿಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರು ಅರ್ಹರೋ ಅವರನ್ನೇ ಆಯ್ಕೆ ಮಾಡುತ್ತಾರೆ ಎಂದು ಹೇಳಿದರು.

 

 

ಆಂದೋಲನ ಡೆಸ್ಕ್

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

6 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

6 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

8 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

8 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

8 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

9 hours ago