ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ ಕುರಿತ ತಡೆಯಾಜ್ಞೆ ಮಾರ್ಪಡಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.
ಋತುಚಕ್ರದ ರಜೆ ಕುರಿತು ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಆದರೆ ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಎಜಿ ಶಶಿಕಿರಣ್ ಶೆಟ್ಟಿ ಮೇಲ್ಮನವಿ ಮಾಡಿದ್ದರು.
ಇದನ್ನು ಓದಿ: 482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್ ಖಂಡ್ರೆ
ರಾಜ್ಯ ಸರ್ಕಾರದ ವಾದ ಕೇಳದೇ ಹೈಕೋರ್ಟ್ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿದೆ. ಋತುಚಕ್ರ ರಜೆ ಆದೇಶಕ್ಕೆ ಮುನ್ನ ಸರ್ಕಾರ ಕಾನೂನು ಪಾಲಿಸಿದೆ. ಹೀಗಾಗಿ ತಡೆಯಾಜ್ಞೆ ಮಾರ್ಪಡಿಸುವಂತೆ ಅಡ್ವಕೇಟ್ ಜನರಲ್ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಸರ್ಕಾರದ ವಾದ ಆಲಿಸಿದ ಬಳಿಕವೇ ಅರ್ಜಿ ಬಗ್ಗೆ ಆದೇಶ ನೀಡಲಾಗುವುದು ಎಂದು ಹೇಳಿರುವ ಹೈಕೋರ್ಟ್ ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ನಿಗದಿಪಡಿಸಿದೆ. ಹೀಗಾಗಿ ಸದ್ಯ ಋತುಚಕ್ರ ರಜೆ ಆದೇಶಕ್ಕೆ ತಡೆಯಾಜ್ಞೆಯಿಲ್ಲ ಎಂದು ತಿಳಿದುಬಂದಿದೆ.
ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್…
– 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3 ಕೋಟಿ ಡೆಪಾಸಿಟ್ ಪತ್ತೆ ಬೆಳಗಾವಿ : ಇಲ್ಲಿನ ನಗರಾಭಿವೃದ್ಧಿ…
ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…
ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…
ಡಿಎಚ್ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…
ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…