ರಾಜ್ಯ

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ ಕುರಿತ ತಡೆಯಾಜ್ಞೆ ಮಾರ್ಪಡಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.

ಋತುಚಕ್ರದ ರಜೆ ಕುರಿತು ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಆದರೆ ಹೈಕೋರ್ಟ್‌ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಎಜಿ ಶಶಿಕಿರಣ್‌ ಶೆಟ್ಟಿ ಮೇಲ್ಮನವಿ ಮಾಡಿದ್ದರು.

ಇದನ್ನು ಓದಿ: 482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ರಾಜ್ಯ ಸರ್ಕಾರದ ವಾದ ಕೇಳದೇ ಹೈಕೋರ್ಟ್‌ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿದೆ. ಋತುಚಕ್ರ ರಜೆ ಆದೇಶಕ್ಕೆ ಮುನ್ನ ಸರ್ಕಾರ ಕಾನೂನು ಪಾಲಿಸಿದೆ. ಹೀಗಾಗಿ ತಡೆಯಾಜ್ಞೆ ಮಾರ್ಪಡಿಸುವಂತೆ ಅಡ್ವಕೇಟ್‌ ಜನರಲ್‌ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಸರ್ಕಾರದ ವಾದ ಆಲಿಸಿದ ಬಳಿಕವೇ ಅರ್ಜಿ ಬಗ್ಗೆ ಆದೇಶ ನೀಡಲಾಗುವುದು ಎಂದು ಹೇಳಿರುವ ಹೈಕೋರ್ಟ್‌ ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ನಿಗದಿಪಡಿಸಿದೆ. ಹೀಗಾಗಿ ಸದ್ಯ ಋತುಚಕ್ರ ರಜೆ ಆದೇಶಕ್ಕೆ ತಡೆಯಾಜ್ಞೆಯಿಲ್ಲ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಮಂಜಿನ ನಡುವೆ ಕೇಸರಿ ರೈಲು; ಕಾಗಿನೆರೆ ದೃಶ್ಯ ವೈರಲ್

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಧಾನಿ ಮೋದಿ, ರೈಲ್ವೆ  ಸಚಿವ ಅಶ್ವಿನಿ ವೈಷ್ಣವ್ ಗಮನ ಸೆಳೆದ ಪಶ್ಚಿಮಘಟ್ಟದ ಪ್ರಕೃತಿ ಸೌಂದರ್ಯ ಸೋಮವಾರಪೇಟೆ: ಪಶ್ಚಿಮಘಟ್ಟದ…

4 mins ago

ಕೋಟೆ ಟಿಎಪಿಸಿಎಂಎಸ್ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿ

ಮಂಜು ಕೋಟೆ ಗುರುವಾರ ಚುನಾವಣೆ: ಅಧಿಕಾರ ಹಿಡಿಯಲು ಪಕ್ಷಗಳ ಪೈಪೋಟಿ; ಜನರಲ್ಲಿ ಕುತೂಹಲ ಹೆಚ್.ಡಿ.ಕೋಟೆ: ಬಿಜೆಪಿ-ಜಾ.ದಳ ಮೈತ್ರಿ ಮತ್ತು ಕಾಂಗ್ರೆಸ್…

11 mins ago

ಅರೇಪುರ ಗ್ರಾಮಕ್ಕಿಲ್ಲ ಸರ್ಕಾರಿ ಬಸ್ ಸೌಲಭ್ಯ

ಮಹೇಂದ್ರ ಹಸಗೂಲಿ ಗ್ರಾಮಸ್ಥರಿಗೆ ನಿತ್ಯ ಎರಡು ಕಿ.ಮೀ. ಬಸ್‌ಗಾಗಿ ನಡೆದುಕೊಂಡು ಹೋಗಬೇಕಾದ ದುಸ್ಥಿತಿ ಗುಂಡ್ಲುಪೇಟೆ: ತಾಲ್ಲೂಕಿನ ಮೈಸೂರು-ಊಟಿ ಹೆದ್ದಾರಿಯ ಮಾರ್ಗದಲ್ಲಿರುವ…

17 mins ago

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

14 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

14 hours ago