ರಾಜ್ಯ

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ ಕುರಿತ ತಡೆಯಾಜ್ಞೆ ಮಾರ್ಪಡಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.

ಋತುಚಕ್ರದ ರಜೆ ಕುರಿತು ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಆದರೆ ಹೈಕೋರ್ಟ್‌ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಎಜಿ ಶಶಿಕಿರಣ್‌ ಶೆಟ್ಟಿ ಮೇಲ್ಮನವಿ ಮಾಡಿದ್ದರು.

ಇದನ್ನು ಓದಿ: 482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ರಾಜ್ಯ ಸರ್ಕಾರದ ವಾದ ಕೇಳದೇ ಹೈಕೋರ್ಟ್‌ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿದೆ. ಋತುಚಕ್ರ ರಜೆ ಆದೇಶಕ್ಕೆ ಮುನ್ನ ಸರ್ಕಾರ ಕಾನೂನು ಪಾಲಿಸಿದೆ. ಹೀಗಾಗಿ ತಡೆಯಾಜ್ಞೆ ಮಾರ್ಪಡಿಸುವಂತೆ ಅಡ್ವಕೇಟ್‌ ಜನರಲ್‌ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಸರ್ಕಾರದ ವಾದ ಆಲಿಸಿದ ಬಳಿಕವೇ ಅರ್ಜಿ ಬಗ್ಗೆ ಆದೇಶ ನೀಡಲಾಗುವುದು ಎಂದು ಹೇಳಿರುವ ಹೈಕೋರ್ಟ್‌ ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ನಿಗದಿಪಡಿಸಿದೆ. ಹೀಗಾಗಿ ಸದ್ಯ ಋತುಚಕ್ರ ರಜೆ ಆದೇಶಕ್ಕೆ ತಡೆಯಾಜ್ಞೆಯಿಲ್ಲ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

19 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

19 hours ago