ರಾಜ್ಯ

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ನೀಡಿದ್ದ ತನ್ನದೇ ತಡೆಯಾಜ್ಞೆಯನ್ನು ಏಕಸದಸ್ಯ ನ್ಯಾಯಪೀಠವೊಂದು ಕೆಲವೇ ಗಂಟೆಗಳ ಅಂತರದಲ್ಲಿ ತೆರವುಗೊಳಿಸಿದ ಅಪರೂಪದ ಘಟನೆಗೆ ಕರ್ನಾಟಕ ಹೈಕೋರ್ಟ್ ಸಾಕ್ಷಿಯಾಯಿತು.

ಸರ್ಕಾರದ ಅಧಿಸೂಚನೆ ಪ್ರಶ್ನಿಸಿ, ಬೆಂಗಳೂರು ಹೋಟೆಲುಗಳ ಸಂಘ ದ ಅಧ್ಯಕ್ಷ ಎಚ್.ಎಸ್.ಸುಬ್ರಹ್ಮಣ್ಯ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಬೆಳಗಿನ ಕಲಾಪದಲ್ಲಿ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಬಿ.ಕೆ.ಪ್ರಶಾಂತ್ ಕುಮಾರ್ ಅವರ ವಾದ ಆಲಿಸಿದ ನ್ಯಾಯಪೀಠ, ಅಽಸೂಚನೆಗೆ ಮಧ್ಯಂತರ ತಡೆ ನೀಡಿತು. ರಾಜ್ಯ ಸರ್ಕಾರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯ ಹೊಂದಿದೆ ಎಂದು ಆದೇಶಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು.

ಇದನ್ನು ಓದಿ: ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಈ ತಡೆ ಆದೇಶ ಹೊರಬೀಳುತ್ತಿದ್ದಂತೆಯೇ, ಕಲಾಪ ಕೊನೆಗೊಳ್ಳುವ ಸಮಯದಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ ಶೆಟ್ಟಿ, ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಹಾಗೂ ಮಧ್ಯಂತರ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ರವಿವರ್ಮ ಕುಮಾರ್ ನ್ಯಾಯಪೀಠದ ಮುಂದೆ ಹಾಜರಾಗಿ, ಪ್ರತಿವಾದಿಗಳ ಆಕ್ಷೇಪಣೆ ಆಲಿಸದೇ ಅರ್ಜಿದಾರರ ಮಧ್ಯಂತರ ಅದೇಶ ಮಾನ್ಯ ಮಾಡಲಾಗಿದೆ ಎಂದು ಆದೇಶಕ್ಕೆ ತೀವ್ರ ತಕರಾರು ವ್ಯಕ್ತಪಡಿಸಿದರು.

ನ್ಯಾಯಪೀಠದ ಮಧ್ಯಂತರ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ ಶಶಿಕಿರಣ ಶೆಟ್ಟಿ ಅವರು, ಋತುಚಕ್ರದ ರಜೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೀತಿ ರೂಪಿಸಬೇಕು ಎಂದು ಸುಪ್ರೀಂ ಕೋರ್ಟ್ ಪ್ರಕರಣವೊಂದರಲ್ಲಿ ಆದೇಶಿಸಿದೆ. ಇದಕ್ಕೆ ಅನುಗುಣವಾಗಿಯೇ ರಾಜ್ಯ ಕಾನೂನು ಆಯೋಗ ಶಿಫಾರಸು ಮಾಡಿದೆ. ಇದನ್ನೆಲ್ಲಾ ಪರಿಗಣಿಸಿಯೇ, ರಾಜ್ಯ ಸರ್ಕಾರ ಸಾಂವಿಧಾನಿಕವಾಗಿ ಕೊಡಮಾಡಲಾಗಿರುವ ೧೪೨ನೇ ವಿಧಿಯಡಿ ತನ್ನ ಅಽಕಾರ ಬಳಸಿ ಈ ಕ್ರಮ ಕೈಗೊಂಡಿದೆ. ಅಧಿಸೂಚನೆ ಕಾನೂನು ಬದ್ಧವಾಗಿಯೇ ಇದೆ. ಹೀಗಿರುವಾಗ, ಸರ್ಕಾರದ ವಿಸ್ತ ತ ವಾದ ಆಲಿಸದೆಯೇ ಅಽಸೂಚನೆಗೆ ತಡೆ ನೀಡಿರುವುದು ಸಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ ತಡೆ ತೆರವುಗೊಳಿಸುವಂತೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಬೆಳಿಗ್ಗೆಯಷ್ಟೇ ಸರ್ಕಾರದ ಅಧಿಸೂಚನೆಗೆ ನೀಡಿದ್ದ ತನ್ನದೇ ತಡೆಯಾಜ್ಞೆ ಆದೇಶವನ್ನು ಹಿಂಪಡೆಯಿತು. ಬುಧವಾರ (ಡಿ.೧೦) ಉಭಯ ಪಕ್ಷಕಾರರ ವಾದ ಆಲಿಸಿ, ಮಧ್ಯಂತರ ತಡೆ ಆದೇಶದ ಬಗ್ಗೆ ಸೂಕ್ತ ನಿರ್ಣಯ ಹೊರಡಿಸಲಾಗುವುದು ಎಂದು ತಿಳಿಸಿತು.

ಅರ್ಜಿಯಲ್ಲಿ ಏನಿದೆ..?
ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ಮಟ್ಟಿಗೆ ವೇತನ ಸಹಿತ ಮುಟ್ಟಿನ ರಜೆ ಒದಗಿಸಬೇಕು ಎಂದು ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ೨೦೨೫ರ ನವೆಂಬರ್ ೨೦ರಂದು ಅಧಿಸೂಚನೆ ಹೊರಡಿಸಿತ್ತು. ಇದು ಸಂವಿಧಾನದ ೧೪ನೇ ವಿಧಿಗೆ ವಿರುದ್ಧವಾಗಿದ್ದು ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸೋನಮ್‌ ವಾಂಗ್ಚುಕ್‌ಗೆ ಅಗತ್ಯ ವೈದ್ಯಕೀಯ ನೆರವು ನೀಡುತ್ತೇವೆ: ದೆಹಲಿ ಹೈಕೋರ್ಟ್‌ಗೆ ಕೇಂದ್ರ ಮಾಹಿತಿ

ನವದೆಹಲಿ: ಜಂತರ್‌ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್‌ ವಾಂಗ್ಚುಕ್‌ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿರುವ…

13 hours ago

ಉಪಸಭಾಪತಿ ಪ್ರಾಣೇಶ್‌ ಪರಿಷತ್‌ ಸದಸ್ಯತ್ವ ರದ್ದು

ನವದೆಹಲಿ: ಉಪಸಭಾಪತಿ ಪ್ರಾಣೇಶ್‌ ಪರಿಷತ್‌ ಸದಸ್ಯತ್ವ ರದ್ದುಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ…

13 hours ago

ಮಾಜಿ ಪ್ರಧಾನಿ ಎಚ್‌ಡಿಡಿ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿರ: ವೈದ್ಯರ ಮಾಹಿತಿ

ಬೆಂಗಳೂರು: ದೇವೇಗೌಡರ ಪತ್ನಿ ಚೆನ್ನಮ್ಮ ಆರಾಮಾಗಿದ್ದಾರೆ ಎಂದು ಮಣಿಪಾಲ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಚೆನ್ನಮ್ಮ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ…

13 hours ago

ಓದುಗರ ಪತ್ರ: ತೆರವಾಯಿತೆ

ತೆರವಾಯಿತೆ ಫುಟ್‌ಪಾತ್‌ನಲ್ಲಿ ಕಟ್ಟಿಕೊಂಡಿದ್ದ ಅನ್ನದ ಬಟ್ಟಲು; ನಿರುದ್ಯೋಗ ನಿವಾರಣಾತೊಟ್ಟಿಲು ಶಕ್ತಿ ತುಂಬಲಿ ಮತ್ತೊಂದು ಕಟ್ಟಲು ಎಲ್ಲರ ಜೀವನ ಜಾಲವೇ ಮುಂದಕೂ…

21 hours ago

ಓದುಗರ ಪತ್ರ: ಕೆಪಿಎಸ್‌ಸಿ ಹಗರಣ; ಯುವಜನರ ಭವಿಷ್ಯಕ್ಕೆ ಕೊಳ್ಳಿ

ಕೆಪಿಎಸ್‌ಸಿ ಭ್ರಷ್ಟಾಚಾರದ ಕುರಿತು ಇತ್ತೀಚಿನ ಸುದ್ದಿ ಕಣ್ಣು ತೆರೆಸುವಂತಿದೆ. ದಕ್ಷ ಅಧಿಕಾರಿಗಳನ್ನು ಆರಿಸಬೇಕಾದ ಸಾಂವಿಧಾನಿಕ ಸಂಸ್ಥೆಯ ಅಧ್ಯಕ್ಷರೇ ಅಮಾನತ್ತುಗೊಂಡಿರುವುದು ಇಡೀ…

21 hours ago

ಓದುಗರ ಪತ್ರ: ಯಕ್ಷಪ್ರಶ್ನೆ

ಮಾಸ್ಕ್ ಧರಿಸಿ ಸಿಟಿ ಬಸ್ಸಿನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಕರ್ತವ್ಯಲೋಪ ಎಸಗಿದ…

21 hours ago