ರಾಜ್ಯ

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ನೀಡಿದ್ದ ತನ್ನದೇ ತಡೆಯಾಜ್ಞೆಯನ್ನು ಏಕಸದಸ್ಯ ನ್ಯಾಯಪೀಠವೊಂದು ಕೆಲವೇ ಗಂಟೆಗಳ ಅಂತರದಲ್ಲಿ ತೆರವುಗೊಳಿಸಿದ ಅಪರೂಪದ ಘಟನೆಗೆ ಕರ್ನಾಟಕ ಹೈಕೋರ್ಟ್ ಸಾಕ್ಷಿಯಾಯಿತು.

ಸರ್ಕಾರದ ಅಧಿಸೂಚನೆ ಪ್ರಶ್ನಿಸಿ, ಬೆಂಗಳೂರು ಹೋಟೆಲುಗಳ ಸಂಘ ದ ಅಧ್ಯಕ್ಷ ಎಚ್.ಎಸ್.ಸುಬ್ರಹ್ಮಣ್ಯ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಬೆಳಗಿನ ಕಲಾಪದಲ್ಲಿ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಬಿ.ಕೆ.ಪ್ರಶಾಂತ್ ಕುಮಾರ್ ಅವರ ವಾದ ಆಲಿಸಿದ ನ್ಯಾಯಪೀಠ, ಅಽಸೂಚನೆಗೆ ಮಧ್ಯಂತರ ತಡೆ ನೀಡಿತು. ರಾಜ್ಯ ಸರ್ಕಾರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯ ಹೊಂದಿದೆ ಎಂದು ಆದೇಶಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು.

ಇದನ್ನು ಓದಿ: ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಈ ತಡೆ ಆದೇಶ ಹೊರಬೀಳುತ್ತಿದ್ದಂತೆಯೇ, ಕಲಾಪ ಕೊನೆಗೊಳ್ಳುವ ಸಮಯದಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ ಶೆಟ್ಟಿ, ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಹಾಗೂ ಮಧ್ಯಂತರ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ರವಿವರ್ಮ ಕುಮಾರ್ ನ್ಯಾಯಪೀಠದ ಮುಂದೆ ಹಾಜರಾಗಿ, ಪ್ರತಿವಾದಿಗಳ ಆಕ್ಷೇಪಣೆ ಆಲಿಸದೇ ಅರ್ಜಿದಾರರ ಮಧ್ಯಂತರ ಅದೇಶ ಮಾನ್ಯ ಮಾಡಲಾಗಿದೆ ಎಂದು ಆದೇಶಕ್ಕೆ ತೀವ್ರ ತಕರಾರು ವ್ಯಕ್ತಪಡಿಸಿದರು.

ನ್ಯಾಯಪೀಠದ ಮಧ್ಯಂತರ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ ಶಶಿಕಿರಣ ಶೆಟ್ಟಿ ಅವರು, ಋತುಚಕ್ರದ ರಜೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೀತಿ ರೂಪಿಸಬೇಕು ಎಂದು ಸುಪ್ರೀಂ ಕೋರ್ಟ್ ಪ್ರಕರಣವೊಂದರಲ್ಲಿ ಆದೇಶಿಸಿದೆ. ಇದಕ್ಕೆ ಅನುಗುಣವಾಗಿಯೇ ರಾಜ್ಯ ಕಾನೂನು ಆಯೋಗ ಶಿಫಾರಸು ಮಾಡಿದೆ. ಇದನ್ನೆಲ್ಲಾ ಪರಿಗಣಿಸಿಯೇ, ರಾಜ್ಯ ಸರ್ಕಾರ ಸಾಂವಿಧಾನಿಕವಾಗಿ ಕೊಡಮಾಡಲಾಗಿರುವ ೧೪೨ನೇ ವಿಧಿಯಡಿ ತನ್ನ ಅಽಕಾರ ಬಳಸಿ ಈ ಕ್ರಮ ಕೈಗೊಂಡಿದೆ. ಅಧಿಸೂಚನೆ ಕಾನೂನು ಬದ್ಧವಾಗಿಯೇ ಇದೆ. ಹೀಗಿರುವಾಗ, ಸರ್ಕಾರದ ವಿಸ್ತ ತ ವಾದ ಆಲಿಸದೆಯೇ ಅಽಸೂಚನೆಗೆ ತಡೆ ನೀಡಿರುವುದು ಸಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ ತಡೆ ತೆರವುಗೊಳಿಸುವಂತೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಬೆಳಿಗ್ಗೆಯಷ್ಟೇ ಸರ್ಕಾರದ ಅಧಿಸೂಚನೆಗೆ ನೀಡಿದ್ದ ತನ್ನದೇ ತಡೆಯಾಜ್ಞೆ ಆದೇಶವನ್ನು ಹಿಂಪಡೆಯಿತು. ಬುಧವಾರ (ಡಿ.೧೦) ಉಭಯ ಪಕ್ಷಕಾರರ ವಾದ ಆಲಿಸಿ, ಮಧ್ಯಂತರ ತಡೆ ಆದೇಶದ ಬಗ್ಗೆ ಸೂಕ್ತ ನಿರ್ಣಯ ಹೊರಡಿಸಲಾಗುವುದು ಎಂದು ತಿಳಿಸಿತು.

ಅರ್ಜಿಯಲ್ಲಿ ಏನಿದೆ..?
ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ಮಟ್ಟಿಗೆ ವೇತನ ಸಹಿತ ಮುಟ್ಟಿನ ರಜೆ ಒದಗಿಸಬೇಕು ಎಂದು ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ೨೦೨೫ರ ನವೆಂಬರ್ ೨೦ರಂದು ಅಧಿಸೂಚನೆ ಹೊರಡಿಸಿತ್ತು. ಇದು ಸಂವಿಧಾನದ ೧೪ನೇ ವಿಧಿಗೆ ವಿರುದ್ಧವಾಗಿದ್ದು ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

5 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

5 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

5 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

5 hours ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

5 hours ago

ಯುವಜನರ ಕೈಯಲ್ಲಿ ಮೊಬೈಲ್ ಇದೆ; ದಿಕ್ಕು ಇದೆಯೇ?

ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…

5 hours ago