ಉಡುಪಿ: ಮದುಮೇಹ ರಕ್ತದೊತ್ತಡದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದಾರೆ. ಇದನ್ನ ಅರಿಯದ ಬುದ್ಧಿಮಾಂದ್ಯ ಪುತ್ರಿ, ಜನ್ಮದಾತೆಯ ಶವದ ಜೊತೆ ನಾಲ್ಕು ದಿನ ದೂಡಿ ಸಾವನ್ನಪ್ಪಿದ ಘಟನೆ ಉಡುಪಿಯ ಕುಂದಾಪುರ ತಾಲೂಕಿನ ದಾಸನಹಾಡಿ ಗ್ರಾಮದಲ್ಲಿ ಜರುಗಿದೆ.
ಗ್ರಾಮದ ನಿವಾಸಿ ತಾಯಿ ಜಯಂತಿ ಶೆಟ್ಟಿ(62) ಮಗಳು ಪ್ರಗತಿ ಶೆಟ್ಟಿ(32) ಮೃತಪಟ್ಟವರು. ಮನೆಯಲ್ಲಿ ತಾಯಿಯೇ ಅಡುಗೆ ಕೆಲಸ ಹಾಗೂ ಇತ್ಯಾದಿ ಮಾಡುತ್ತಿದ್ದರು. ತಾಯಿ ಮೃತಪಟ್ಟಿರುವುದು ಅರಿಯದೆ ಮಗಳು ಪ್ರಗತಿ ನಾಲ್ಕು ದಿನ ಅನ್ನ, ನೀರು ಇಲ್ಲದೆ ಕಳೆದಿದ್ದಾರೆ. ಇಂದು (ಮೇ.19) ಶವ ದುರ್ವಾಸನೆ ಬರಲು ಆರಂಭಿಸಿದೆ. ಅನುಮಾನಗೊಂಡ ಅಕ್ಕ-ಪಕ್ಕದ ಜನರು ಮನೆಯೊಳಗೆ ಬಂದು ನೋಡಿದಾಗ ಜಯಂತಿ ಶವ ಕಂಡಿದೆ. ಅಲ್ಲೇ ಪಕ್ಕದಲ್ಲಿ ಮಗಳು ಪ್ರಗತಿ ಕೂಡ ಅಸ್ವಶ್ಥಗೊಂಡು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಈ ವಿಚಾರವನ್ನು ಕುಂದಾಪುರ ಪೊಲೀಸರಿಗೆ ತಿಳಿಸಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ತೀವ್ರ ಅಸ್ವಶ್ಥಗೊಂಡು ಬಿದ್ದಿದ್ದ ಪ್ರಗತಿ ಶೆಟ್ಟಿಯನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ, ಜಯಂತಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪ್ರಗತಿಶೆಟ್ಟಿ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಬಳಿಕ ಎರಡು ಶವಗಳ ಮರಣೋತ್ತರ ಪರೀಕ್ಷೆ ಮುಗಿದ ಮೇಲೆ ಕುಂದಾಪುರ ಪೊಲೀಸರು ಹೆಂಗವಳ್ಳಿಯಲ್ಲಿ ತಾಯಿ, ಮಗಳ ಅಂತ್ಯಸಂಸ್ಕಾರವನ್ನ ನೇರವೇರಿಸಿದರು.
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…
ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…
ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…