ಉಡುಪಿ: ಮದುಮೇಹ ರಕ್ತದೊತ್ತಡದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದಾರೆ. ಇದನ್ನ ಅರಿಯದ ಬುದ್ಧಿಮಾಂದ್ಯ ಪುತ್ರಿ, ಜನ್ಮದಾತೆಯ ಶವದ ಜೊತೆ ನಾಲ್ಕು ದಿನ ದೂಡಿ ಸಾವನ್ನಪ್ಪಿದ ಘಟನೆ ಉಡುಪಿಯ ಕುಂದಾಪುರ ತಾಲೂಕಿನ ದಾಸನಹಾಡಿ ಗ್ರಾಮದಲ್ಲಿ ಜರುಗಿದೆ.
ಗ್ರಾಮದ ನಿವಾಸಿ ತಾಯಿ ಜಯಂತಿ ಶೆಟ್ಟಿ(62) ಮಗಳು ಪ್ರಗತಿ ಶೆಟ್ಟಿ(32) ಮೃತಪಟ್ಟವರು. ಮನೆಯಲ್ಲಿ ತಾಯಿಯೇ ಅಡುಗೆ ಕೆಲಸ ಹಾಗೂ ಇತ್ಯಾದಿ ಮಾಡುತ್ತಿದ್ದರು. ತಾಯಿ ಮೃತಪಟ್ಟಿರುವುದು ಅರಿಯದೆ ಮಗಳು ಪ್ರಗತಿ ನಾಲ್ಕು ದಿನ ಅನ್ನ, ನೀರು ಇಲ್ಲದೆ ಕಳೆದಿದ್ದಾರೆ. ಇಂದು (ಮೇ.19) ಶವ ದುರ್ವಾಸನೆ ಬರಲು ಆರಂಭಿಸಿದೆ. ಅನುಮಾನಗೊಂಡ ಅಕ್ಕ-ಪಕ್ಕದ ಜನರು ಮನೆಯೊಳಗೆ ಬಂದು ನೋಡಿದಾಗ ಜಯಂತಿ ಶವ ಕಂಡಿದೆ. ಅಲ್ಲೇ ಪಕ್ಕದಲ್ಲಿ ಮಗಳು ಪ್ರಗತಿ ಕೂಡ ಅಸ್ವಶ್ಥಗೊಂಡು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಈ ವಿಚಾರವನ್ನು ಕುಂದಾಪುರ ಪೊಲೀಸರಿಗೆ ತಿಳಿಸಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ತೀವ್ರ ಅಸ್ವಶ್ಥಗೊಂಡು ಬಿದ್ದಿದ್ದ ಪ್ರಗತಿ ಶೆಟ್ಟಿಯನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ, ಜಯಂತಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪ್ರಗತಿಶೆಟ್ಟಿ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಬಳಿಕ ಎರಡು ಶವಗಳ ಮರಣೋತ್ತರ ಪರೀಕ್ಷೆ ಮುಗಿದ ಮೇಲೆ ಕುಂದಾಪುರ ಪೊಲೀಸರು ಹೆಂಗವಳ್ಳಿಯಲ್ಲಿ ತಾಯಿ, ಮಗಳ ಅಂತ್ಯಸಂಸ್ಕಾರವನ್ನ ನೇರವೇರಿಸಿದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…