ಬೆಂಗಳೂರು: ಎಲ್ಲಾ ರಂಗದಲ್ಲೂ ದರ ಹೆಚ್ಚಿಸಿದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಆಸ್ತಿ ನೋಂದಣಿ ಶುಲ್ಕವು ಶೇಕಡಾ.60ರಷ್ಟು ಏರಿಕೆಯಾಗಿದೆ. ಆಸ್ತಿ ಗೈಡೆನ್ಸ್ ಮೌಲ್ಯವು ಶೇಕಡಾ.30ರಷ್ಟು ಏರಿಕೆ ಕಂಡಿದೆ. ವಾಹನಗಳ ನೋಂದಣಿ ದರವು ಶೇಕಡಾ.10ರಷ್ಟು ಜಾಸ್ತಿ ಆದರೆ, ಆಸ್ಪತ್ರೆಗಳ ಸೇವಾ ಶುಲ್ಕ ಶೇಕಡಾ.5ರಷ್ಟು ಏರಿದೆ. ವಿದ್ಯುತ್ ದರವು ಶೇಕಡಾ.14.5ರಷ್ಟು ಜಾಸ್ತಿಯಾಗಿದೆ. ನೀರಿನ ದರವು ಶೇಕಡಾ.30ರಷ್ಟು ಏರಿಕೆಯಾಗಿದೆ. ಹಾಲಿನ ದರ ಶೇಕಡಾ.15ರಷ್ಟು ಹೆಚ್ಚಾಗಿದೆ ಎಂದು ಟೀಕೆ ಮಾಡಿದರು.
ಸಿದ್ದರಾಮಯ್ಯ ಸರ್ಕಾರ ಎರಡು ವರ್ಷದಲಲಿ ರೂ, 1,90,000 ಕೋಟಿ ಸಾಲ ಮಾಡಿದೆ ಎಂಬುದನ್ನು ನಾಡಿನ ಜನರು ಗಮನಿಸಬೇಕಿದೆ. ವಿವಿಧ ಸರ್ಕಾರಿ ಇಲಾಖೆಗಳ ಆರು ಸಾವಿರ ಕೋಟಿ ವಿದ್ಯುತ್ ಬಿಲ್ ಬಾಕಿ ಇದ್ದು, ಅದರ ವಸೂಲಿ ಕುರಿತು ಸಂಬಂಧಿತ ಸಚಿವರ ಜೊತೆ ಚರ್ಚಿಸಿದ್ದಾಗಿ ಇಂಧನ ಸಚಿವ ಜಾರ್ಜ್ ಅವರೇ ಹೇಳಿದ್ದಾರೆ. ಸಂಬಳ ಕೊಡಲಾಗದ ವಿದ್ಯುತ್ ಬಿಲ್ ಭರಿಸಲಾರದ ದಾರುಣ ಸ್ಥಿತಿಗೆ ತಲುಪಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಇನ್ನು ಬಸ್ಸಿನ ಪ್ರಯಾಣದರವು ಶೇಕಡಾ.15ರಷ್ಟು ಹೆಚ್ಚಾಗಿದೆ. ಮೆಟ್ರೋ ಪ್ರಯಾಣ ದರ ಗರಿಷ್ಠ ಏರಿಕೆ ಒಂದು ದುಸ್ಸಾಹಸ. ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ ಮೆಟ್ರೋ ಪ್ರಯಾಣ ದರ ಗರಿಷ್ಠ ಮಟ್ಟಕ್ಕೆ ಏರಿಸಿದ್ದಾರೆ ಎಂದು ದೂರಿದರು. ಚೆನ್ನೈ, ಲಕ್ನೋ, ಮುಂಬೈ, ಕೋಲ್ಕತ್ತಾ, ದೆಹಲಿಯಲ್ಲಿ ಮೆಟ್ರೋ ದರ ಏರಿಕೆ ಆಗಿಲ್ಲ. ರಾಜ್ಯ ಸರ್ಕಾರದ ಆಗ್ರಹದಿಂದ ಇಲ್ಲಿ ಹೀಗಾಗಿದೆ ಎಂದು ಕಿಡಿಕಾರಿದರು.
ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…
ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.…
ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…
ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…
ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…