ಬೆಂಗಳೂರು: ಎಲ್ಲಾ ರಂಗದಲ್ಲೂ ದರ ಹೆಚ್ಚಿಸಿದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಆಸ್ತಿ ನೋಂದಣಿ ಶುಲ್ಕವು ಶೇಕಡಾ.60ರಷ್ಟು ಏರಿಕೆಯಾಗಿದೆ. ಆಸ್ತಿ ಗೈಡೆನ್ಸ್ ಮೌಲ್ಯವು ಶೇಕಡಾ.30ರಷ್ಟು ಏರಿಕೆ ಕಂಡಿದೆ. ವಾಹನಗಳ ನೋಂದಣಿ ದರವು ಶೇಕಡಾ.10ರಷ್ಟು ಜಾಸ್ತಿ ಆದರೆ, ಆಸ್ಪತ್ರೆಗಳ ಸೇವಾ ಶುಲ್ಕ ಶೇಕಡಾ.5ರಷ್ಟು ಏರಿದೆ. ವಿದ್ಯುತ್ ದರವು ಶೇಕಡಾ.14.5ರಷ್ಟು ಜಾಸ್ತಿಯಾಗಿದೆ. ನೀರಿನ ದರವು ಶೇಕಡಾ.30ರಷ್ಟು ಏರಿಕೆಯಾಗಿದೆ. ಹಾಲಿನ ದರ ಶೇಕಡಾ.15ರಷ್ಟು ಹೆಚ್ಚಾಗಿದೆ ಎಂದು ಟೀಕೆ ಮಾಡಿದರು.
ಸಿದ್ದರಾಮಯ್ಯ ಸರ್ಕಾರ ಎರಡು ವರ್ಷದಲಲಿ ರೂ, 1,90,000 ಕೋಟಿ ಸಾಲ ಮಾಡಿದೆ ಎಂಬುದನ್ನು ನಾಡಿನ ಜನರು ಗಮನಿಸಬೇಕಿದೆ. ವಿವಿಧ ಸರ್ಕಾರಿ ಇಲಾಖೆಗಳ ಆರು ಸಾವಿರ ಕೋಟಿ ವಿದ್ಯುತ್ ಬಿಲ್ ಬಾಕಿ ಇದ್ದು, ಅದರ ವಸೂಲಿ ಕುರಿತು ಸಂಬಂಧಿತ ಸಚಿವರ ಜೊತೆ ಚರ್ಚಿಸಿದ್ದಾಗಿ ಇಂಧನ ಸಚಿವ ಜಾರ್ಜ್ ಅವರೇ ಹೇಳಿದ್ದಾರೆ. ಸಂಬಳ ಕೊಡಲಾಗದ ವಿದ್ಯುತ್ ಬಿಲ್ ಭರಿಸಲಾರದ ದಾರುಣ ಸ್ಥಿತಿಗೆ ತಲುಪಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಇನ್ನು ಬಸ್ಸಿನ ಪ್ರಯಾಣದರವು ಶೇಕಡಾ.15ರಷ್ಟು ಹೆಚ್ಚಾಗಿದೆ. ಮೆಟ್ರೋ ಪ್ರಯಾಣ ದರ ಗರಿಷ್ಠ ಏರಿಕೆ ಒಂದು ದುಸ್ಸಾಹಸ. ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ ಮೆಟ್ರೋ ಪ್ರಯಾಣ ದರ ಗರಿಷ್ಠ ಮಟ್ಟಕ್ಕೆ ಏರಿಸಿದ್ದಾರೆ ಎಂದು ದೂರಿದರು. ಚೆನ್ನೈ, ಲಕ್ನೋ, ಮುಂಬೈ, ಕೋಲ್ಕತ್ತಾ, ದೆಹಲಿಯಲ್ಲಿ ಮೆಟ್ರೋ ದರ ಏರಿಕೆ ಆಗಿಲ್ಲ. ರಾಜ್ಯ ಸರ್ಕಾರದ ಆಗ್ರಹದಿಂದ ಇಲ್ಲಿ ಹೀಗಾಗಿದೆ ಎಂದು ಕಿಡಿಕಾರಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…