ಬೆಂಗಳೂರು: ರಾಜ್ಯ ಸರ್ಕಾರ ಜನಸಾಮಾನ್ಯರ ಗಾಯದ ಮೇಲೆ ಮತ್ತೊಂದು ಬರೆ ಎಳೆದಿದೆ ಎಂದು ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅಶೋಕ್ ಅವರು, ಪೆಟ್ರೋಲ್, ಡೀಸೆಲ್, ಹಾಲು, ಬಸ್ ದರ ಏರಿಕೆಯ ಬರೆಯಿಂದ ಈಗಾಗಲೇ ಹೈರಾಣಾಗಿರುವ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಬೆಂಗಳೂರು ಮೆಟ್ರೋ ದರವನ್ನು ಏಕಾಏಕಿ 50% ಏರಿಕೆ ಮಾಡಿದೆ. ಇದರಿಂದ ಜನಸಾಮಾನ್ಯರಿಗೆ ಈಗ ಮೆಟ್ರೋ ಸಂಚಾರ ಕೈಗೆಟುಕದ ಪರಿಸ್ಥಿತಿ ಎದುರಾಗಿದ್ದು, ಮೆಟ್ರೋ ಪ್ರಯಾಣಕ್ಕಿಂತ ಸ್ವಂತ ಸ್ಕೂಟರ್, ಬೈಕಿನ ಪ್ರಯಾಣ ಜೇಬಿಗೆ ಹಿತ ಎನ್ನುವಂತಾಗಿದೆ.
ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸಿ, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ, ಪರಿಸರ ಮಾಲಿನ್ಯಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಸರ್ಕಾರ ಜನರನ್ನು ಮೆಟ್ರೋದಿಂದ ವಿಮುಖರಾಗುವಂತೆ ಮಾಡುತ್ತಿದೆ.
ಈ ಕೂಡಲೇ ಮೆಟ್ರೋ ದರ ಏರಿಕೆಯ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…