ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಮೈಕ್ರೋ ಫೈನಾನ್ಸ್ ವಿಧೇಯಕವನ್ನು ಜಾರಿಗೆ ತರಲು ಮುಂದಾಗಿದ್ದು, ವಿಧಾನಸಭೆಯಲ್ಲಿ ಇಂದು ಅಂಗೀಕಾರ ಮಾಡಲಾಗಿದೆ.
ವಿಧಾನಸಭೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಮೈಕ್ರೋ ಫೈನಾನ್ಸ್ ತಡೆಗೆ ಮಸೂದೆಯನ್ನು ಮಂಡಿಸಿದ್ದರು. ಆ ವಿಧೇಯಕವನ್ನು ಇಂದು(ಮಾರ್ಚ್.10) ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಅವರು ಅಂಗೀಕರಿಸಿದ್ದಾರೆ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ರಾಜ್ಯದ ಸಾಕಷ್ಟು ಜನತೆ ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಿನ್ನೆಲೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತಂದಿತ್ತು. ಬಳಿಕ ಸುಗ್ರೀವಾಜ್ಞೆಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದರು. ಅಂತೆಯೇ ಇದೀಗ ವಿಧಾನಸಬೆಯಲ್ಲಿ ಮೈಕ್ರೋ ಫೈನಾನ್ಸ್ ವಿಧೇಯಕ ಅಂಗೀಕಾರವಾಗಿದೆ.





