ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ಗಳ ಕಿರುಕುಳ ಮಿತಿ ಮೀರಿದ್ದು, ಇವುಗಳ ಹಾವಳಿ ತಡೆಗಟ್ಟಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಿದ್ದು, ನೋಂದಣಿಯಾಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಇಂದು ನಡೆದ ಮೈಕ್ರೋ ಫೈನಾನ್ಸ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರಿಗೆ ಕ್ಲಾಸ್ ತೆಗೆದುಕೊಂಡರು.
ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಾ? ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು ಎಂದು ಸಿದ್ದರಾಮಯ್ಯ ಕಿಡಿಕಾರಿದರು.
ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ? ಆರ್ಬಿಐ ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ? ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ ಕೆವೈಸಿ ಮಾಡಿಸುತ್ತಿಲ್ಲ ಏಕೆ ಎಂದು ಕಂಪನಿಗಳ ಮುಖ್ಯಸ್ಥರನ್ನು ಪ್ರಶ್ನೆ ಮಾಡಿದರು.
ಇದಕ್ಕೆ ಉತ್ತರಿಸಿದ ಮೈಕ್ರೋ ಕಂಪನಿಯವರು, ಆರ್ಬಿಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ. ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು ಎಂದು ಉತ್ತರಿಸಿದರು
ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ವರದಿಗಳು ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…