ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಕರ್ನಾಟಕ ಮೈಕ್ರೋ ಫೈನಾನ್ಸ್ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ಗಳ ಹಾವಳಿ ಹೆಚ್ಚಾಗಿದ್ದು, ಫೈನಾನ್ಸ್ ಕಾಟಕ್ಕೆ ಹೆದರಿ ಬಡ ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಕ್ರೋ ಫೈನಾನ್ಸ್ಗಳ ತಡೆಗೆ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದು, ಸುಗ್ರೀವಾಜ್ಞೆಗೆ ಸಿಎಂ ಸಿದ್ದು ಒಪ್ಪಿಗೆ ನೀಡಿದ್ದಾರೆ.
ಈ ಸುಗ್ರೀವಾಜ್ಞೆ ಪ್ರಕಾರ ತಪ್ಪಿತಸ್ಥರಿಗೆ 10 ವರ್ಷಗಳ ಕಾಲ ಶಿಕ್ಷೆ ವಿಧಿಸಲು ಅವಕಾಶವಿದೆ. ಅಲ್ಲದೇ 5 ಲಕ್ಷದವರೆಗೆ ದಂಡ ವಿಧಿಸಲು ಪ್ರಸ್ತಾಪವಿದೆ. ಇನ್ನು ಅನಧಿಕೃತವಾಗಿ ಸಾಲ ನೀಡಿದ್ದರೇ ಅದನ್ನು ಮನ್ನಾ ಮಾಡಲಾಗುವುದು. ನೋಂದಣಿ ರಹಿತ ಮೈಕ್ರೋ ಫೈನಾನ್ಸ್ಗಳ ಅಸಲು, ಬಡ್ಡಿ ಕೂಡ ಮನ್ನಾ ಆಗಲಿದೆ. ಖಾಸಗಿ ಬಡ್ಡಿದಾರರಿಗೂ ಕಡಿವಾಣ ಬೀಳಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಲೇವಾದೇವಿದಾರರು ನೋಂದಣಿ ಮಾಡದೇ ಸಾಲ ವಹಿವಾಡು ಮಾಡುವಂತಿಲ್ಲ. ಸುಗ್ರೀವಾಜ್ಞೆ ಹೊರಡಿಸಿದ 30 ದಿನಗಳ ಒಳಗೆ ನೋಂದಣಿ ಕಡ್ಡಾಯ. ಸಾಲಗಾರರಿಂದ ಯಾವುದೇ ಅಡಮಾನ ಇಟ್ಟುಕೊಳ್ಳುವಂತಿಲ್ಲ. ಅಡಮಾನ ಇಟ್ಟುಕೊಂಡಿದ್ದರೆ ತಪ್ಪದೇ ಹಿಂತಿರುಗಿಸಬೇಕು. ನೋಂದಣಿ ಮಾಡಿಕೊಳ್ಳದ ಲೇವಾದೇವಿದಾರರಿಗೆ ಸಾಲ ಮರುಪಾವತಿಸುವಂತಿಲ್ಲ. ಅಸಲು, ಬಡ್ಡಿ ಎರಡೂ ಮನ್ನಾ ಆಗಲಿದೆ ಎಂದು ಸುಗ್ರೀವಾಜ್ಞೆಯಲ್ಲಿ ಬರೆಯಲಾಗಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…