ಬೆಂಗಳೂರು: ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳ ನೀಡುತ್ತಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು.
ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾರೂ ಕೂಡ ಸಾಲ ಕೊಡಿ ವಸೂಲಿ ಮಾಡಬೇಡಿ ಎಂದು ಹೇಳಲ್ಲ. ಆದರೆ ವಸೂಲಾತಿ ವೇಳೆ ಕಿರುಕುಳ ನೀಡಬಾರದು. ವಸೂಲಾತಿ ವೇಳೆ ರಿಸರ್ವ್ ಬ್ಯಾಂಕ್ ನಿಯಮ ಪಾಲಿಸಬೇಕು ಎಂದು ಹೇಳಿದರು.
ಕಾನೂನು ಏನು ಹೇಳುತ್ತದೆಯೋ ಅದಕ್ಕಿಂತ ಹೆಚ್ಚಿನ ಬಡ್ಡಿ ವಿಧಿಸಬಾರದು. ಸಂಜೆ ಐದರ ಬಳಿಕ ವಸೂಲಿಗೆ ಹೋಗಬಾರದು. ಈ ನಿಯಮಗಳನ್ನು ಉಲ್ಲಂಘನೆ ಮಾಡಿದವರು ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾನೂನು ಉಲ್ಲಂಘಿಸಿದವರ ಮೇಲೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಇಂದು ನಾನು ವಾರ್ನಿಂಗ್ ಮಾಡಿದ್ದೇನೆ. ಈ ಬಗ್ಗೆ ಹೊಸ ಕಾನೂನು ಜಾರಿಗೆ ತರುತ್ತೇವೆ ಎಂದರು. ಅಲ್ಲದೇ ಪರವಾನಗಿ ಇಲ್ಲದೇ ಮನಿ ಲ್ಯಾಂಡಿಂಗ್, ಫೈನಾನ್ಸ್ ಮಾಡಬಾರದು. ಪ್ರತಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲು ಸೂಚನೆ ನೀಡಲಾಗಿದೆ ಎಂದರು.
ಇನ್ನು ಸಹಾಯವಾಣಿಗೆ ದೂರುಗಳು ಬಂದರೆ, ಕಾನೂನು ಉಲ್ಲಂಘನೆ ಮಾಡಿದರೆ ಸುಮೊಟೋ ಕೇಸ್ ದಾಖಲು ಮಾಡಿಕೊಳ್ಳಲಾಗುವುದು. ಕೂಡಲೇ ಹೊಸ ಕಾನೂನನ್ನು ಮಾಡುತ್ತೇವೆ. ಕಾನೂನು, ಗೃಹ ಇಲಾಖೆ ಸೇರಿ ಈ ಕೆಲಸ ಮಾಡಲಿವೆ. ಹೊಸ ಕಾನೂನನ್ನು ಸುಗ್ರೀವಾಜ್ಞೆ ಮೂಲಕ ತರುತ್ತೇವೆ ಎಂದು ಹೇಳಿದರು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…