ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿಯಿಂದ ರಾಜ್ಯದಲ್ಲಿ ಹಲವಾರು ಜನತೆ ತಮ್ಮ ಹುಟ್ಟಿದ ಊರು ತೊರೆಯುತ್ತಿರುವ ವಿಚಾರ ಸುದ್ದಿಯಾಗುತ್ತಿದ್ದಂತೆ ಅದರ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಜನವರಿ.25ರಂದು ಗೃಹ ಕಚೇರಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಸರ್ಕಾರದ ಅಪರ ಕಾರ್ಯದರ್ಶಿ ಕೆ. ಚಿರಂಜೀವಿ ಅವರು ಸಭೆಗೆ ಸಂಬಂಧಿಸಿದ ಸೂಚನಾ ಪತ್ರ ಪ್ರಕಟಿಸಿದ್ದಾರೆ. ಮೈಕ್ರೋ ಫೈನಾನ್ಸ್ಗಳಿಗೆ ಸಂಬಂಧಿಸಿದ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಸಾರ್ವಜನಿಕರು ಊರು ಬಿಡುವ ಸನ್ನಿವೇಶ ಹಲವು ಮಾಧ್ಯಮಗಳಲ್ಲಿ ಬಿತ್ತರವಾಗಿತ್ತು. ಇದರಿಂದ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ಶನಿವಾರ ಬೆಳಿಗ್ಗೆ 11ಕ್ಕೆ ಸಭೆ ಕರೆದಿದ್ದು, ಮೈಕ್ರೋ ಫೈನಾನ್ಸ್ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…