Mysore
20
broken clouds

Social Media

ಮಂಗಳವಾರ, 11 ಆಗಸ್ಟ್ 2026
Light
Dark

ಮತ್ತೆ ರಾಜ್ಯಾಪಾಲರಿಗೆ ಮೈಕ್ರೋ ಫೈನಾನ್ಸ್‌ ಸುಗ್ರಿವಾಜ್ಞೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ ರಾಜ್ಯದ ಜನರನ್ನು ರಕ್ಷಿಸಲು ಜಾರಿ ಮಾಡಿದ್ದ ಸುಗ್ರಿವಾಜ್ಞೆಯನ್ನು ಮತ್ತೆ ರಾಜ್ಯಪಾಲರಿಗೆ ರವಾನೆ ಮಾಡಲಾಗಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಸಚಿವ ಸಂಪುಟ ಸುಗ್ರವಾಜ್ಞೆ ಜಾರಿ ಮಾಡಲು ಒಪ್ಪಿಗೆ ನೀಡಿ ಅಂತಿಮವಾಗಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಆದರೆ, ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಮಸೂದೆಗೆ ಅಂಕಿತ ಹಾಕದೆ ವಾಪಸ್‌ ಕಳುಹಿಸಿದ್ದರು.

ಇದೀಗ ಮೈಕ್ರೋಫೈನಾನ್ಸ್‌ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಆಗತ್ಯತೆ ಬಗ್ಗೆ ವಿವರಿಸಿದ ಸರ್ಕಾರ, ಮತ್ತೆ ರಾಜ್ಯಪಾಲರ ಅಂಕಿತಕ್ಕೆ ವಾಪಸ್‌ ಕಳುಹಿಸಿದೆ. ರಾಜ್ಯಪಾಲರ ಅಂತಿಮ ನಿರ್ಧಾರ ಏನು ಎಂಬುದನ್ನು ಕಾದು ನೋಡಬೇಕಿದೆ.

 

Tags:
error: Content is protected !!