ಧಾರವಾಡ : ರಾಜ್ಯಾದ್ಯಂತ ರೈತರ ಬೇಡಿಕೆ ಹಿನ್ನಲೆಯಲ್ಲಿ ಕೆಲವು ಕೃಷಿ ಸೂಕ್ಷ್ಮ ನೀರಾವರಿ ಪರಿಕರಗಳ ಸವಲತ್ತು ಪಡೆಯಲು ಇರುವ ಕಾಲಮಿತಿಯನ್ನು ಏಳು ವರ್ಷಗಳಿಂದ 5 ವರ್ಷಗಳಿಗೆ ಇಳಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹೆಬ್ಬಳ್ಳಿ ಗ್ರಾಮದಲ್ಲಿ ವಿವಿಧ ಕೃಷಿ ಪ್ರಾತ್ಯಕ್ಷಿಕೆ ಉದ್ಘಾಟಿಸಿ, ಫಲಾನುಭವಿಗಳಿಗೆ ಸೌಲತ್ತು ವಿತರಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರ ಹಿಂದೆಂದಿಗಿಂತ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದೆ . ಮುಂಗಾರು ಹಂಗಾಮಿಗೆ 1700 ಕೋಟಿ ರೂ ಬೆಳೆ ವಿಮೆ ಪಾವತಿಸಲಾಗಿದೆ. ಕಳೆದ ಸಾಲಿನಲ್ಲಿ ಸುಮಾರು 1000 ಕೋಟಿ ರೂ ವೆಚ್ಚದಲ್ಲಿ ಕೃಷಿ ಪರಿಕರಗಳನ್ನು ವಿತರಿಸಲಾಗಿದೆ ಎಂದು ಚಲುವರಾಯಸ್ವಾಮಿ ಹೇಳಿದರು.
ವಿಶ್ವ ವಿದ್ಯಾನಿಲಯಗಳ ಮೂಲಕ ರೈತರಿಗೆ ಸಂಶೋದನೆ, ಮಾರ್ಗದರ್ಶನಗಳ ನೆರವು ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ವಿನಯ್ ಕುಲಕರ್ಣಿ ಕೇತ್ರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದಾರೆ. ನಿರಂತರವಾಗಿ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ಸಚಿವರ ಸಂಪರ್ಕ ಹೊಂದಿದ್ದಾರೆ ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…