ಧಾರವಾಡ : ರಾಜ್ಯಾದ್ಯಂತ ರೈತರ ಬೇಡಿಕೆ ಹಿನ್ನಲೆಯಲ್ಲಿ ಕೆಲವು ಕೃಷಿ ಸೂಕ್ಷ್ಮ ನೀರಾವರಿ ಪರಿಕರಗಳ ಸವಲತ್ತು ಪಡೆಯಲು ಇರುವ ಕಾಲಮಿತಿಯನ್ನು ಏಳು ವರ್ಷಗಳಿಂದ 5 ವರ್ಷಗಳಿಗೆ ಇಳಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹೆಬ್ಬಳ್ಳಿ ಗ್ರಾಮದಲ್ಲಿ ವಿವಿಧ ಕೃಷಿ ಪ್ರಾತ್ಯಕ್ಷಿಕೆ ಉದ್ಘಾಟಿಸಿ, ಫಲಾನುಭವಿಗಳಿಗೆ ಸೌಲತ್ತು ವಿತರಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರ ಹಿಂದೆಂದಿಗಿಂತ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದೆ . ಮುಂಗಾರು ಹಂಗಾಮಿಗೆ 1700 ಕೋಟಿ ರೂ ಬೆಳೆ ವಿಮೆ ಪಾವತಿಸಲಾಗಿದೆ. ಕಳೆದ ಸಾಲಿನಲ್ಲಿ ಸುಮಾರು 1000 ಕೋಟಿ ರೂ ವೆಚ್ಚದಲ್ಲಿ ಕೃಷಿ ಪರಿಕರಗಳನ್ನು ವಿತರಿಸಲಾಗಿದೆ ಎಂದು ಚಲುವರಾಯಸ್ವಾಮಿ ಹೇಳಿದರು.
ವಿಶ್ವ ವಿದ್ಯಾನಿಲಯಗಳ ಮೂಲಕ ರೈತರಿಗೆ ಸಂಶೋದನೆ, ಮಾರ್ಗದರ್ಶನಗಳ ನೆರವು ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ವಿನಯ್ ಕುಲಕರ್ಣಿ ಕೇತ್ರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದಾರೆ. ನಿರಂತರವಾಗಿ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ಸಚಿವರ ಸಂಪರ್ಕ ಹೊಂದಿದ್ದಾರೆ ಎಂದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…