ರಾಜ್ಯ

ಹಾಲು ದರ ಏರಿಕೆ: ಮಾಸಿಕ 9 ಕೋಟಿ ನಷ್ಟ ಎಂದ ರೇವಣ್ಣ

ಹಾಸನ: ಹಾಲಿನ ದರ 4 ರೂ. ಏರಿಕೆಯ ಸರ್ಕಾರದ ನಿರ್ಧಾರದಿಂದ ಹಾಮೂಲ್ ಹಾಗೂ ಮಾರಾಟವಾಗದ ಹಾಲಿಗೂ ನೀಡುವ ಬಟವಾಡೆಯಿಂದ ಮಾಸಿಕ 9 ಕೋಟಿ ರೂಪಾಯಿ ನಷ್ಟವಾಗುವ ಆತಂಕ ಎದುರಾಗಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ, ಸರ್ಕಾರದ ಕಾರ್ಯದರ್ಶಿ ಹಾಗೂ ಕೆಎಂಎಫ್‌ಗೆ ಎರಡು ಬಾರಿ ಪತ್ರ ಬರೆದು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದೇನೆ ಎಂದು ತಿಳಿಸಿದರು.

ಒಟ್ಟಾರೆ 3.18 ಲಕ್ಷ ಲೀಟರ್ ಉತ್ಪನ್ನಗಳು ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾರಾಟವಾಗುತ್ತಿವೆ. ಆದರೆ, ಉಳಿದ 9.40 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ. ಇನ್ನೊಂದು ತಿಂಗಳಲ್ಲಿ 2.5 ಲಕ್ಷ ಲೀಟರ್ ಹಾಲು ಹೆಚ್ಚಾಗುವ ಸಾಧ್ಯತೆ ಇದೆ ಎಂದು ರೇವಣ್ಣ ಹೇಳಿದ್ದಾರೆ.

4 ರೂ. ದರ ಹೆಚ್ಚಳ ಮಾಡಿ ಹಾಲು ಉತ್ಪಾದಕರಿಗೆ ನೀಡುವುದರಿಂದ ಹಾಸನ ಹಾಲು ಒಕ್ಕೂಟಕ್ಕೆ ದಿನಕ್ಕೆ 36 ಲಕ್ಷ ರೂಪಾಯಿ ಮತ್ತು ತಿಂಗಳಿಗೆ 9 ಕೋಟಿ ರೂಪಾಯಿ ನಷ್ಟವಾಗುತ್ತದೆ. ಇದು ಒಕ್ಕೂಟದ ಆರ್ಥಿಕ ಸ್ಥಿತಿಗೆ ದೊಡ್ಡ ಹೊಡೆತವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

“ತಿಂಗಳಿಗೆ 9 ಕೋಟಿ ರೂಪಾಯಿ ನಷ್ಟದಲ್ಲಿ ಹಾಲು ಮಾರಾಟ ಮಾಡುವುದು ಸಾಧ್ಯವೇ? ಈ ವಸ್ತುಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆ” ಎಂದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ವಿಜಯ್ ಪಕ್ಷಕ್ಕೆ ಸೀಟಿ ಗುರುತು ನೀಡಿದ ಆಯೋಗ

ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…

18 mins ago

ಮ.ಬೆಟ್ಟ | ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ ದೃಶ್ಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

29 mins ago

MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ ಇರಲಿದೆ : ಸಿಎಂ

ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…

39 mins ago

ಒಂದು ಎಕರೆಯಲ್ಲಿ 102 ವಿವಿಧ ಬೆಳೆ : ರೋಗರಹಿತ ಬೆಳೆಗಳ ತಳಿ ಪ್ರದರ್ಶನ

ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…

52 mins ago

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ 2 ತಿಂಗಳಲ್ಲಿ ದಾಖಲೆಯ ಆದಾಯ

ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್‌ ಹಾಗೂ…

3 hours ago

ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…

3 hours ago