ಹಾಸನ: ಹಾಲಿನ ದರ 4 ರೂ. ಏರಿಕೆಯ ಸರ್ಕಾರದ ನಿರ್ಧಾರದಿಂದ ಹಾಮೂಲ್ ಹಾಗೂ ಮಾರಾಟವಾಗದ ಹಾಲಿಗೂ ನೀಡುವ ಬಟವಾಡೆಯಿಂದ ಮಾಸಿಕ 9 ಕೋಟಿ ರೂಪಾಯಿ ನಷ್ಟವಾಗುವ ಆತಂಕ ಎದುರಾಗಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ, ಸರ್ಕಾರದ ಕಾರ್ಯದರ್ಶಿ ಹಾಗೂ ಕೆಎಂಎಫ್ಗೆ ಎರಡು ಬಾರಿ ಪತ್ರ ಬರೆದು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದೇನೆ ಎಂದು ತಿಳಿಸಿದರು.
ಒಟ್ಟಾರೆ 3.18 ಲಕ್ಷ ಲೀಟರ್ ಉತ್ಪನ್ನಗಳು ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾರಾಟವಾಗುತ್ತಿವೆ. ಆದರೆ, ಉಳಿದ 9.40 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ. ಇನ್ನೊಂದು ತಿಂಗಳಲ್ಲಿ 2.5 ಲಕ್ಷ ಲೀಟರ್ ಹಾಲು ಹೆಚ್ಚಾಗುವ ಸಾಧ್ಯತೆ ಇದೆ ಎಂದು ರೇವಣ್ಣ ಹೇಳಿದ್ದಾರೆ.
4 ರೂ. ದರ ಹೆಚ್ಚಳ ಮಾಡಿ ಹಾಲು ಉತ್ಪಾದಕರಿಗೆ ನೀಡುವುದರಿಂದ ಹಾಸನ ಹಾಲು ಒಕ್ಕೂಟಕ್ಕೆ ದಿನಕ್ಕೆ 36 ಲಕ್ಷ ರೂಪಾಯಿ ಮತ್ತು ತಿಂಗಳಿಗೆ 9 ಕೋಟಿ ರೂಪಾಯಿ ನಷ್ಟವಾಗುತ್ತದೆ. ಇದು ಒಕ್ಕೂಟದ ಆರ್ಥಿಕ ಸ್ಥಿತಿಗೆ ದೊಡ್ಡ ಹೊಡೆತವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
“ತಿಂಗಳಿಗೆ 9 ಕೋಟಿ ರೂಪಾಯಿ ನಷ್ಟದಲ್ಲಿ ಹಾಲು ಮಾರಾಟ ಮಾಡುವುದು ಸಾಧ್ಯವೇ? ಈ ವಸ್ತುಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆ” ಎಂದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…