ಹಾಸನ: ಹಾಲಿನ ದರ 4 ರೂ. ಏರಿಕೆಯ ಸರ್ಕಾರದ ನಿರ್ಧಾರದಿಂದ ಹಾಮೂಲ್ ಹಾಗೂ ಮಾರಾಟವಾಗದ ಹಾಲಿಗೂ ನೀಡುವ ಬಟವಾಡೆಯಿಂದ ಮಾಸಿಕ 9 ಕೋಟಿ ರೂಪಾಯಿ ನಷ್ಟವಾಗುವ ಆತಂಕ ಎದುರಾಗಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ, ಸರ್ಕಾರದ ಕಾರ್ಯದರ್ಶಿ ಹಾಗೂ ಕೆಎಂಎಫ್ಗೆ ಎರಡು ಬಾರಿ ಪತ್ರ ಬರೆದು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದೇನೆ ಎಂದು ತಿಳಿಸಿದರು.
ಒಟ್ಟಾರೆ 3.18 ಲಕ್ಷ ಲೀಟರ್ ಉತ್ಪನ್ನಗಳು ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾರಾಟವಾಗುತ್ತಿವೆ. ಆದರೆ, ಉಳಿದ 9.40 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ. ಇನ್ನೊಂದು ತಿಂಗಳಲ್ಲಿ 2.5 ಲಕ್ಷ ಲೀಟರ್ ಹಾಲು ಹೆಚ್ಚಾಗುವ ಸಾಧ್ಯತೆ ಇದೆ ಎಂದು ರೇವಣ್ಣ ಹೇಳಿದ್ದಾರೆ.
4 ರೂ. ದರ ಹೆಚ್ಚಳ ಮಾಡಿ ಹಾಲು ಉತ್ಪಾದಕರಿಗೆ ನೀಡುವುದರಿಂದ ಹಾಸನ ಹಾಲು ಒಕ್ಕೂಟಕ್ಕೆ ದಿನಕ್ಕೆ 36 ಲಕ್ಷ ರೂಪಾಯಿ ಮತ್ತು ತಿಂಗಳಿಗೆ 9 ಕೋಟಿ ರೂಪಾಯಿ ನಷ್ಟವಾಗುತ್ತದೆ. ಇದು ಒಕ್ಕೂಟದ ಆರ್ಥಿಕ ಸ್ಥಿತಿಗೆ ದೊಡ್ಡ ಹೊಡೆತವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
“ತಿಂಗಳಿಗೆ 9 ಕೋಟಿ ರೂಪಾಯಿ ನಷ್ಟದಲ್ಲಿ ಹಾಲು ಮಾರಾಟ ಮಾಡುವುದು ಸಾಧ್ಯವೇ? ಈ ವಸ್ತುಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆ” ಎಂದರು.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…