ರಾಜ್ಯ

ನನ್ನ ಪ್ರಕಾರ ಹಾಲಿನ ದರ ಇನ್ನಷ್ಟು ಹೆಚ್ಚಬೇಕಿತ್ತು ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಹಾಲಿನ ದರ 2 ರೂ ಹೆಚ್ಚಳ ಮಾಡಿರುವುದನ್ನು ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಮರ್ಥಿಸಿಕೊಂಡಿದ್ದು, ಅಲ್ಲದೇ ನನ್ನ ಪ್ರಕಾರ ಹಾಲಿನ ದರ ಇನ್ನಷ್ಟು ಹೆಚ್ಚಬೇಕಿತ್ತು ಎಂದು ಹೇಳಿಕೆ ನೀಡಿದ್ದಾರೆ.

ಹಾಲಿನ ದರ ಏರಿಕೆಗೆ ಬಿಜೆಪಿ ಮತ್ತು ರಾಜ್ಯದ ಜನತೆ ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಿಜೆಪಿಯವರು ರೈತ ವಿರೋಧಿಗಳು. ಜಾಸ್ತಿಯಾಗಿರುವ 2ರೂ ರೈತರಿಗೆ ತಲುಪುತ್ತೆ. ರೈತರಿಗೆ ಹಣ ತಲುಪೋಲ್ಲ ಅನ್ನೋದನ್ನು ಯಾರು ಹೇಳಿದ್ರು ಎಂದು ಪ್ರಶ್ನೆ ಮಾಡಿದ ಅವರು, ಕೆಎಂಎಫ್‌ ಉಳಿದರೆ ರೈತರು ಉಳಿದಂತೆ ಎಂದಿದ್ದಾರೆ.

ರೈತರು ಸಾಲದಿಂದ ಎಲ್ಲಾ ಹಸುಗಳನ್ನು ಮಾರಾಟ ಮಾಡುತ್ತಿದ್ದಾರೆ. ಬಿಜೆಪಿಯವರ ರೈತ ವಿರೋಧಿ ಧೋರಣೆ ಎದ್ದು ಕಾಣುತ್ತಿದೆ. ಬೇರೆ ರಾಜ್ಯದಲ್ಲಿ ಹಾಲಿನ ದರ ಎಷ್ಟಿದೆ ನೋಡಲಿ. ಆ ಮೇಲೆ ದರ ಏರಿಕೆ ಬಗ್ಗೆ ಮಾತನಾಡಲಿ ಎಂದು ಬಿಜೆಪಿಗೆ ಟಾಂಗ್‌ ಕೊಟ್ಟಿದ್ದಾರೆ.

ನನ್ನ ಪ್ರಕಾರ ಹಾಲಿನ ದರ ಇನ್ನಷ್ಟು ಹೆಚ್ಚಬೇಕಿತ್ತು. ಕೆಎಂಎಫ್‌ ಎಂದರೆ ರೈತರ ಒಕ್ಕೂಟ. ನನ್ನ ಪ್ರಕಾರ ಇನ್ನೂ ಹಾಲಿನ ದರ ಜಾಸ್ತಿ ಮಾಡಬೇಕು. ಯಾರೂ ಏನು ಬೇಕಾದರೂ ಟೀಕೆ ಮಾಡಿಕೊಳ್ಳಲಿ ಎಂದು ಬಿಜೆಪಿ ನಾಯಕರಿಗೆ ಟಾಂಗ್‌ ಕೊಟ್ಟರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

39 mins ago

ವರದಿ ಬಿಟ್ಟು ಕ್ಷೇತ್ರ ಭೇಟಿ ಮಾಡಿ : ಅಧಿಕಾರಿಗಳಿಗೆ ಎಚ್‌ಡಿಕೆ ಸೂಚನೆ

ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…

44 mins ago

ಗೆಲ್ಲಿಸಿಕೊಂಡು ಬರಲಿ ನೋಡೋಣ : ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು

ಮೈಸೂರು : ನಾನು ಅಹಿಂದ ಚಾಂಪಿಯನ್‌ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್‌ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…

1 hour ago

ಪಶ್ಚಿಮ ಬಿಕ್ಕಟ್ಟು : ಸಂಘರ್ಷ ಸಂಧಾನ ಸಭೆ ಮುಂದೂಡಿಕೆ?

ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…

1 hour ago

ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು ; 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ…

2 hours ago

ಹೊಗೇನಕಲ್‌ : ನೀರಿನ ಸೆಳೆತಕ್ಕೆ ಸಿಲುಕಿ ಓರ್ವ ಸಾವು

ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ…

2 hours ago